‘ನಾವು ಎಷ್ಟೇ ಕಠಿಣ ಕ್ರಮಗಳನ್ನು ಕೈಗೊಂಡರೂ, ಜನರು ಹೊರಗಡೆ ಬಂದು ಗುಂಪು ಸೇರುವುದು ತಪ್ಪುತ್ತಿಲ್ಲ. ಅದಕ್ಕಾಗಿ, ಪಾಲಿಕೆಯೇ ಬೀದಿ ವ್ಯಾಪಾರಿಗಳಿಗೆ ಪ್ರತಿ ಬೀದಿಗಳಿಗೆ ತೆರಳಿ ವ್ಯಾಪಾರ ಮಾಡಲು ಅವಕಾಶ ಕಲ್ಪಿಸಿದೆ. ಆಟೊ, ಟಂಟಂನಂತಹ ವಾಹನ ಹಾಗೂ ತಳ್ಳುಗಾಡಿಗಳಲ್ಲಿ ವ್ಯಾಪಾರಿಗಳು ಅಗತ್ಯ ವಸ್ತುಗಳನ್ನು ತಂದು ಮಾರಾಟ ಮಾಡಲಿದ್ದಾರೆ. ಏಪ್ರಿಲ್ 14ರವರೆಗೆ ಇದು ಮುಂದುವರಿಯಲಿದೆ’ ಎಂದು ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ‘ಪ್ರಜಾವಾಣಿ’ಗೆ ತಿಳಿಸಿದರು.