‘ಡಿಸೆಂಬರ್ನಲ್ಲಿ ಮುಷ್ಕರ ನಡೆಸಿದ್ದಾಗ ಬೇಡಿಕೆಗಳನ್ನು ಈಡೇರಿಸುವುದಾಗಿ ಸರ್ಕಾರ ಲಿಖಿತ ಭರವಸೆ ನೀಡಿತ್ತು. ಆದರೆ, ಮುಖ್ಯವಾದ ವೇತನ ಆಯೋಗ ಜಾರಿ ಹೊರತುಪಡಿಸಿ, ಉಳಿದ ಬೇಡಿಕೆಗಳಿಗೆ ಸ್ಪಂದಿಸಿರುವುದಾಗಿ ಸಾರಿಗೆ ಸಚಿವರು ಹೇಳುತ್ತಿದ್ದಾರೆ. ವಾಸ್ತವದಲ್ಲಿ ಯಾವ ಬೇಡಿಕೆಗೂ ಸರಿಯಾಗಿ ಸ್ಪಂದಿಸಿಲ್ಲ. ಕಾರ್ಮಿಕ ಸಂಘಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಹಾಗಾಗಿ, ಬುಧವಾರದಿಂದ ಮತ್ತೆ ಮುಷ್ಕರಕ್ಕೆ ಕರೆ ನೀಡಲಾಗಿದೆ’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.