ಎಂಟು ದಿನಗಳ ಹಿಂದೆ ನಡೆದ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಭಾನುವಾರ ರಾತ್ರಿ ಜಕಣಿ ಬಾವಿ ಬಳಿ ಪರಸ್ಪರರಲ್ಲಿ ವಾಗ್ವಾದ ನಡೆದಿತ್ತು. ಈ ವೇಳೆ ಓಂಕಾರ ರಾಯಚೂರ ಸೇರಿದಂತೆ ಐವರು ಯುವಕರು ಅಜಯ್ ಮೇಲೆ ಏಕಾಏಕಿ ಬಾಟಲಿಗಳಿಂದ ಹಲ್ಲೆ ನಡೆಸಿದ್ದರು. ಗಾಯಾಳು ಅಜಯ್ ಸದ್ಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.