<p><strong>ಉಪ್ಪಿನಬೆಟಗೇರಿ:</strong> ಸಕಾಲಕ್ಕೆ ಬಸ್ಗಳು ಬಾರದಿದ್ದುದನ್ನು ಖಂಡಿಸಿ ವಿದ್ಯಾರ್ಥಿಗಳು ಇಲ್ಲಿನ ಹೊಸ ಬಸ್ ನಿಲ್ಧಾಣದಲ್ಲಿ ಶುಕ್ರವಾರ 11 ಬಸ್ಗಳ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.</p>.<p>ಮೂರು ಗಂಟೆ ಬಸ್ ಸಂಚಾರ ತಡೆದಿದ್ದರಿಂದ ಸಂಚಾರ ದಟ್ಟಣೆ ಉಂಟಾಗಿ ಪ್ರಯಾಣಿಕರು ತೊಂದರೆ ಅನುಭವಿಸಿದರು.ಗ್ರಾಮ ಪಂಚಾಯಿತಿ ಅಧ್ಯಕ್ಷ ಬಶೀರ ಅಹ್ಮದ ಮಾಳಗಿಮನಿ ಹಾಗೂ ಗರಗ ಪಿಎಸ್ಐ ಸಿದ್ದರಾಮಪ್ಪ ಉನ್ನದ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮನವೊಲಿಸಲು ಯತ್ನಿಸಿದರು.</p>.<p>ಉಪ್ಪಿನಬೆಟಗೇರಿಗೆ ಬಂದ ಧಾರವಾಡದ ಸಾರಿಗೆ ಇಲಾಖೆ ಅಧಿಕಾರಿಗಳು, ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ, ಸಮಸ್ಯೆ ಆಲಿಸಿದರು.</p>.<p>ಬೆಳಿಗ್ಗೆ ಮತ್ತು ಸಂಜೆ ವೇಳೆ ಪ್ರಯಾಣಿಕರ ಸಂಖ್ಯೆ ಹೆಚ್ಚು ಇರುತ್ತದೆ. ಹೀಗಾಗಿ ಈ ಸಮಸ್ಯೆ ಉಂಟಾಗುತ್ತಿದೆ. ಶೀಘ್ರ ಈ ಸಮಯದಲ್ಲಿ ಹೆಚ್ಚುವರಿ ಬಸ್ ಸೌಲಭ್ಯ ಒದಗಿಸಲು ಕ್ರಮ ಜರುಗಿಸಲಾಗುವುದು ಎಂದು ಧಾರವಾಡ ಡಿಪೊ ವ್ಯವಸ್ಥಾಪಕರಾದ ಕವಿತಾ ಪಾಟೀಲ ತಿಳಿಸಿದರು.</p>.<p>ಗರಗ ಪಿಎಸ್ಐ ಶಿವಯೋಗಿ ಲೋಹರ ಮಾತನಾಡಿದರು.</p>.<div><blockquote>ವಿದ್ಯಾರ್ಥಿಗಳ ಮನವಿ ಪತ್ರ ಸ್ವೀಕರಿಸಲಾಗಿದೆ. ಬೇಡಿಕೆಯಂತೆ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಲಾಗುವುದು </blockquote><span class="attribution">- ಕವಿತಾ ಪಾಟೀಲ, ಡಿಪೊ ವ್ಯವಸ್ಥಾಪಕಿ ಧಾರವಾಡ </span></div>.<p>ಬಸ್ಗಳು ಸಮಯಕ್ಕೆ ಬಾರದಿರುವುದರಿಂದ ಸಮಸ್ಯೆಯಾಗುತ್ತಿರುವ ಬಗ್ಗೆ ಸಾರಿಗೆ ಸಂಸ್ಥೆ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಅಲ್ಲದೆ, ಹೆಚ್ಚುವರಿ ಬಸ್ ಸೌಲಭ್ಯ ಒದಗಿಸದಿದ್ದರೆ ಪ್ರತಿಭಟನೆ ಮಾಡುವುದಾಗಿಯೂ ತಿಳಿಸಲಾಗಿತ್ತು. ಆದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಪ್ಪಿನಬೆಟಗೇರಿ:</strong> ಸಕಾಲಕ್ಕೆ ಬಸ್ಗಳು ಬಾರದಿದ್ದುದನ್ನು ಖಂಡಿಸಿ ವಿದ್ಯಾರ್ಥಿಗಳು ಇಲ್ಲಿನ ಹೊಸ ಬಸ್ ನಿಲ್ಧಾಣದಲ್ಲಿ ಶುಕ್ರವಾರ 11 ಬಸ್ಗಳ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.</p>.<p>ಮೂರು ಗಂಟೆ ಬಸ್ ಸಂಚಾರ ತಡೆದಿದ್ದರಿಂದ ಸಂಚಾರ ದಟ್ಟಣೆ ಉಂಟಾಗಿ ಪ್ರಯಾಣಿಕರು ತೊಂದರೆ ಅನುಭವಿಸಿದರು.ಗ್ರಾಮ ಪಂಚಾಯಿತಿ ಅಧ್ಯಕ್ಷ ಬಶೀರ ಅಹ್ಮದ ಮಾಳಗಿಮನಿ ಹಾಗೂ ಗರಗ ಪಿಎಸ್ಐ ಸಿದ್ದರಾಮಪ್ಪ ಉನ್ನದ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮನವೊಲಿಸಲು ಯತ್ನಿಸಿದರು.</p>.<p>ಉಪ್ಪಿನಬೆಟಗೇರಿಗೆ ಬಂದ ಧಾರವಾಡದ ಸಾರಿಗೆ ಇಲಾಖೆ ಅಧಿಕಾರಿಗಳು, ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ, ಸಮಸ್ಯೆ ಆಲಿಸಿದರು.</p>.<p>ಬೆಳಿಗ್ಗೆ ಮತ್ತು ಸಂಜೆ ವೇಳೆ ಪ್ರಯಾಣಿಕರ ಸಂಖ್ಯೆ ಹೆಚ್ಚು ಇರುತ್ತದೆ. ಹೀಗಾಗಿ ಈ ಸಮಸ್ಯೆ ಉಂಟಾಗುತ್ತಿದೆ. ಶೀಘ್ರ ಈ ಸಮಯದಲ್ಲಿ ಹೆಚ್ಚುವರಿ ಬಸ್ ಸೌಲಭ್ಯ ಒದಗಿಸಲು ಕ್ರಮ ಜರುಗಿಸಲಾಗುವುದು ಎಂದು ಧಾರವಾಡ ಡಿಪೊ ವ್ಯವಸ್ಥಾಪಕರಾದ ಕವಿತಾ ಪಾಟೀಲ ತಿಳಿಸಿದರು.</p>.<p>ಗರಗ ಪಿಎಸ್ಐ ಶಿವಯೋಗಿ ಲೋಹರ ಮಾತನಾಡಿದರು.</p>.<div><blockquote>ವಿದ್ಯಾರ್ಥಿಗಳ ಮನವಿ ಪತ್ರ ಸ್ವೀಕರಿಸಲಾಗಿದೆ. ಬೇಡಿಕೆಯಂತೆ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಲಾಗುವುದು </blockquote><span class="attribution">- ಕವಿತಾ ಪಾಟೀಲ, ಡಿಪೊ ವ್ಯವಸ್ಥಾಪಕಿ ಧಾರವಾಡ </span></div>.<p>ಬಸ್ಗಳು ಸಮಯಕ್ಕೆ ಬಾರದಿರುವುದರಿಂದ ಸಮಸ್ಯೆಯಾಗುತ್ತಿರುವ ಬಗ್ಗೆ ಸಾರಿಗೆ ಸಂಸ್ಥೆ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಅಲ್ಲದೆ, ಹೆಚ್ಚುವರಿ ಬಸ್ ಸೌಲಭ್ಯ ಒದಗಿಸದಿದ್ದರೆ ಪ್ರತಿಭಟನೆ ಮಾಡುವುದಾಗಿಯೂ ತಿಳಿಸಲಾಗಿತ್ತು. ಆದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>