<p><strong>ಧಾರವಾಡ:</strong> ವಿದ್ಯಾರ್ಥಿಗಳು ಕಥೆ, ಕವನ, ಕಾದಂಬರಿಗಳನ್ನು ಓದಬೇಕು. ಸಾಹಿತ್ಯಾಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ ಹೇಳಿದರು.</p>.<p>ನಗರದ ವಿದ್ಯಾಗಿರಿಯ ಜೆಎಸ್ಎಸ್ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯಲ್ಲಿ ಗುರುವಾರ ಆಯೋಜಿಸಿದ್ದ ವಾರ್ಷಿಕ ಸ್ನೇಹಸಮ್ಮೇಳನದಲ್ಲಿ ಮಾತನಾಡಿದರು.</p>.<p>ಸಾಹಿತ್ಯ ಓದುವುದರಿಂದ ಭಾಷಾ ಜ್ಞಾನ ವೃದ್ಧಿಸುತ್ತದೆ. ವಿಷಯಗಳು ತಿಳಿಯುತ್ತವೆ. ಪ್ರಚಲಿತ ವಿದ್ಯಾಮಾನಗಳನ್ನು ತಿಳಿದುಕೊಳ್ಳಬೇಕು. ಅಂಕ ಗಳಿಕೆಗೆ ಸೀಮಿತವಾಗದೆ ಎಲ್ಲ ವಿಷಯಗಳ ಬಗ್ಗೆ ಜ್ಞಾನ ಸಂಪಾದಿಸಬೇಕು ಎಂದರು.</p>.<p>ಉಪಪ್ರಾಚಾರ್ಯ ಪ್ರೊ. ಸೂರಜ್ ಜೈನ್ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಕಲೆ, ಕ್ರೀಡೆ, ಸಂಗೀತ ಸಹಿತ ಇತರ ಚಟುವಟಿಕೆಗಳಲ್ಲಿ ಭಾಗವಹಿಸಿ ಪ್ರತಿಭೆ ಅನಾವರಣಗೊಳಿಸಬೇಕು ಎಂದು ಹೇಳಿದರು.</p>.<p>ವಿವೇಕ ಲಕ್ಷ್ಮೇಶ್ವರ, ಕೆ.ಎಚ್.ನಾಗಚಂದ್ರ, ಆರ್.ವಿ.ಚಿಟಗುಪ್ಪಿ, ಎನ್.ಜಿ.ಪುಡಕಲಕಟ್ಟಿ, ಶ್ರೀಕಾಂತ ರಾಗಿಕಲ್ಲಾಪುರ, ಶ್ರವಣಕುಮಾರ ಯೋಗಿ, ಜಿನ್ನಪ್ಪ ಕುಂದಗೋಳ, ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪಲ್ಲವಿ ಸುಂಕದ, ಮಧು ದಳವಾಯಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ವಿದ್ಯಾರ್ಥಿಗಳು ಕಥೆ, ಕವನ, ಕಾದಂಬರಿಗಳನ್ನು ಓದಬೇಕು. ಸಾಹಿತ್ಯಾಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ ಹೇಳಿದರು.</p>.<p>ನಗರದ ವಿದ್ಯಾಗಿರಿಯ ಜೆಎಸ್ಎಸ್ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯಲ್ಲಿ ಗುರುವಾರ ಆಯೋಜಿಸಿದ್ದ ವಾರ್ಷಿಕ ಸ್ನೇಹಸಮ್ಮೇಳನದಲ್ಲಿ ಮಾತನಾಡಿದರು.</p>.<p>ಸಾಹಿತ್ಯ ಓದುವುದರಿಂದ ಭಾಷಾ ಜ್ಞಾನ ವೃದ್ಧಿಸುತ್ತದೆ. ವಿಷಯಗಳು ತಿಳಿಯುತ್ತವೆ. ಪ್ರಚಲಿತ ವಿದ್ಯಾಮಾನಗಳನ್ನು ತಿಳಿದುಕೊಳ್ಳಬೇಕು. ಅಂಕ ಗಳಿಕೆಗೆ ಸೀಮಿತವಾಗದೆ ಎಲ್ಲ ವಿಷಯಗಳ ಬಗ್ಗೆ ಜ್ಞಾನ ಸಂಪಾದಿಸಬೇಕು ಎಂದರು.</p>.<p>ಉಪಪ್ರಾಚಾರ್ಯ ಪ್ರೊ. ಸೂರಜ್ ಜೈನ್ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಕಲೆ, ಕ್ರೀಡೆ, ಸಂಗೀತ ಸಹಿತ ಇತರ ಚಟುವಟಿಕೆಗಳಲ್ಲಿ ಭಾಗವಹಿಸಿ ಪ್ರತಿಭೆ ಅನಾವರಣಗೊಳಿಸಬೇಕು ಎಂದು ಹೇಳಿದರು.</p>.<p>ವಿವೇಕ ಲಕ್ಷ್ಮೇಶ್ವರ, ಕೆ.ಎಚ್.ನಾಗಚಂದ್ರ, ಆರ್.ವಿ.ಚಿಟಗುಪ್ಪಿ, ಎನ್.ಜಿ.ಪುಡಕಲಕಟ್ಟಿ, ಶ್ರೀಕಾಂತ ರಾಗಿಕಲ್ಲಾಪುರ, ಶ್ರವಣಕುಮಾರ ಯೋಗಿ, ಜಿನ್ನಪ್ಪ ಕುಂದಗೋಳ, ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪಲ್ಲವಿ ಸುಂಕದ, ಮಧು ದಳವಾಯಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>