<p><strong>ಅಳ್ನಾವರ:</strong> ‘ಒತ್ತಡದ ಬದುಕಿನಲ್ಲಿ ಮಾನಸಿಕ ಸಮತೋಲನ ಕಾಪಾಡಿಕೊಂಡು ಅಧ್ಯಯನಕ್ಕೆ ವಿದ್ಯಾರ್ಥಿಗಳು ಸಜ್ಜಾಗಬೇಕು’ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರವೀಣ ಆನಂದಕಂದಾ ಹೇಳಿದರು.</p>.<p>ಕಾಲೇಜಿನಲ್ಲಿ ತೆರೆದ ನೂತನ ಜಿಮ್ ಉದ್ಘಾಟಿಸಿ ಮಾತನಾಡಿದ ಅವರು, ‘ಈ ಜಿಮ್ನಲ್ಲಿ ಅಧುನಿಕ ಸಲಕರಣೆಗಳನ್ನು ಅಳವಡಿಸಲಾಗಿದೆ. ಸತತ ಓದಿನ ಜೊತೆಗೆ ಏಕಾಗ್ರತೆ ಸಾಧಿಸಲು ಈ ಸಲಕರಣೆಗಳನ್ನು ಬಳಸಿಕೊಂಡು ದೈಹಿಕ ಶ್ರಮ ಹಾಕಬೇಕು’ ಎಂದರು.</p>.<p>ಟೇಬಲ್ ಟೆನಿಸ್ ಕೋರ್ಟ್ನಲ್ಲಿ ಆಟವಾಡಿದ ಬಳಿಕ ಕ್ರೀಡಾ ವಿಭಾಗದ ಪ್ರಬಾರ ಮುಖ್ಯಸ್ಥ ಡಾ. ಪಿ.ಬಿ. ಚಾರಿ ಮಾತನಾಡಿ, ‘ಕಾಲೇಜು ಶಿಕ್ಷಣ ಇಲಾಖೆಯಿಂದ ದೊರೆತ ಈ ಸೌಲಭ್ಯವನ್ನು ಪ್ರತಿಯೊಬ್ಬರೂ ಸದುಪಯೋಗ ಮಾಡಿಕೊಳ್ಳಬೇಕು. ದೈಹಿಕ ಮತ್ತು ಮಾನಸಿಕ ಸದೃಢತೆ ಸಾದಿಸಬೇಕು’ ಎಂದರು.</p>.<p>ವಾಣಿಜ್ಯ ವಿಭಾಗದ ಪ್ರೊ. ದೇವೇಂದ್ರ ತಳವಾರ, ಸುರೇಶ ದೊಡ್ಡಮನಿ, ಡಿ.ಎಫ್. ತಳವಾರ, ಭೀಮನಗೌಡ ಪಾಟೀಲ, ಉಮಾ ಅಂಗಡಿ, ಶೀರಿನಬಾನು, ಅಶೀಫ್ಅಲಿ ಹಂಚಿನಮನಿ, ಜೆ.ಎಸ್. ಕುರಿ, ಮಾರುತಿ ನಂದನ, ಸಿದ್ದೇಶ್ವರ ಕಣಬರ್ಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಳ್ನಾವರ:</strong> ‘ಒತ್ತಡದ ಬದುಕಿನಲ್ಲಿ ಮಾನಸಿಕ ಸಮತೋಲನ ಕಾಪಾಡಿಕೊಂಡು ಅಧ್ಯಯನಕ್ಕೆ ವಿದ್ಯಾರ್ಥಿಗಳು ಸಜ್ಜಾಗಬೇಕು’ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರವೀಣ ಆನಂದಕಂದಾ ಹೇಳಿದರು.</p>.<p>ಕಾಲೇಜಿನಲ್ಲಿ ತೆರೆದ ನೂತನ ಜಿಮ್ ಉದ್ಘಾಟಿಸಿ ಮಾತನಾಡಿದ ಅವರು, ‘ಈ ಜಿಮ್ನಲ್ಲಿ ಅಧುನಿಕ ಸಲಕರಣೆಗಳನ್ನು ಅಳವಡಿಸಲಾಗಿದೆ. ಸತತ ಓದಿನ ಜೊತೆಗೆ ಏಕಾಗ್ರತೆ ಸಾಧಿಸಲು ಈ ಸಲಕರಣೆಗಳನ್ನು ಬಳಸಿಕೊಂಡು ದೈಹಿಕ ಶ್ರಮ ಹಾಕಬೇಕು’ ಎಂದರು.</p>.<p>ಟೇಬಲ್ ಟೆನಿಸ್ ಕೋರ್ಟ್ನಲ್ಲಿ ಆಟವಾಡಿದ ಬಳಿಕ ಕ್ರೀಡಾ ವಿಭಾಗದ ಪ್ರಬಾರ ಮುಖ್ಯಸ್ಥ ಡಾ. ಪಿ.ಬಿ. ಚಾರಿ ಮಾತನಾಡಿ, ‘ಕಾಲೇಜು ಶಿಕ್ಷಣ ಇಲಾಖೆಯಿಂದ ದೊರೆತ ಈ ಸೌಲಭ್ಯವನ್ನು ಪ್ರತಿಯೊಬ್ಬರೂ ಸದುಪಯೋಗ ಮಾಡಿಕೊಳ್ಳಬೇಕು. ದೈಹಿಕ ಮತ್ತು ಮಾನಸಿಕ ಸದೃಢತೆ ಸಾದಿಸಬೇಕು’ ಎಂದರು.</p>.<p>ವಾಣಿಜ್ಯ ವಿಭಾಗದ ಪ್ರೊ. ದೇವೇಂದ್ರ ತಳವಾರ, ಸುರೇಶ ದೊಡ್ಡಮನಿ, ಡಿ.ಎಫ್. ತಳವಾರ, ಭೀಮನಗೌಡ ಪಾಟೀಲ, ಉಮಾ ಅಂಗಡಿ, ಶೀರಿನಬಾನು, ಅಶೀಫ್ಅಲಿ ಹಂಚಿನಮನಿ, ಜೆ.ಎಸ್. ಕುರಿ, ಮಾರುತಿ ನಂದನ, ಸಿದ್ದೇಶ್ವರ ಕಣಬರ್ಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>