<p><strong>ಉಪ್ಪಿನಬೆಟಗೇರಿ</strong>: ‘ಮನುಷ್ಯನ ಪ್ರತಿ ಸಮಸ್ಯೆಗೆ ಶರಣರ ವಚನಗಳಲ್ಲಿ ಪರಿಹಾರವಿದ್ದು, ನಾವೆಲ್ಲ ಶರಣ ಸಂಸ್ಕೃತಿಯ ಅಧ್ಯಯನ ಮಾಡುವ ಅಗತ್ಯವಿದೆ’ ಎಂದು ಸ್ಥಳೀಯ ಮೂರುಸಾವಿರ ವಿರಕ್ತಮಠದ ಕುಮಾರ ವಿರೂಪಾಕ್ಷ ಸ್ವಾಮೀಜಿ ಹೇಳಿದರು.</p>.<p>ಗ್ರಾಮದ ಮೂರುಸಾವಿರ ವಿರಕ್ತಮಠದಲ್ಲಿ ಅಕ್ಕನ ಬಳಗ ಮತ್ತು ಗೆಳೆಯರ ಬಳಗದಿಂದ ಗುರುವಾರ ಜರುಗಿದ ಮಾಸಿಕ ಶಿವಾನುಭವ ಗೋಷ್ಠಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>‘ಪ್ರತಿ ತಿಂಗಳು ಹುಣ್ಣಿಮೆ ದಿನ ನಡೆಯುವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವ್ಯಕ್ತಿಗಳನ್ನು ಗುರುತಿಸಿ ಗೌರವಿಸಲಾಗುತ್ತಿದೆ’ ಎಂದರು.</p>.<p>ಸನ್ಮಾನ ಸ್ವೀಕರಿಸಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ವಿದ್ವಾಂಸ ಶ್ರೀಶೈಲ ಹುದ್ದಾರ ಮಾತನಾಡಿ, ‘ಮಾತೃ ಭಾಷಾ ಕಲಿಕೆಯಿಂದ ಮಾತ್ರ ಈ ನೆಲದ ಸೊಗಡು ಉಳಿಯಲು ಸಾಧ್ಯ. ಆಧುನಿಕತೆಯ ಭರಾಟೆಯಲ್ಲಿ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವುದು ಎಲ್ಲರ ಕರ್ತವ್ಯ. ನಮ್ಮ ಭಾಷೆ ಕನ್ನಡವಾಗಿದ್ದರೂ ನಿತ್ಯವೂ ಅನ್ಯ ಭಾಷೆ ಬಳಸುವುದು ಕಳವಳಕಾರಿ ಸಂಗತಿ’ ಎಂದರು.</p>.<p>ಗ್ರಾಮದ ನಾಗಪ್ಪ ಪೂಜಾರ, ಪತ್ರಕರ್ತ ಪ್ರಕಾಶ ಹೂಗಾರ ಅವರನ್ನು ಸನ್ಮಾನಿಸಲಾಯಿತು. ಕಸ್ತೂರಿ ಯಲಿಗಾರ ಅಕ್ಕಮಹಾದೇವಿ ಜೀವನದ ಕುರಿತು ಮಾತನಾಡಿದರು. ಸ್ಥಳೀಯ ಶಾಲಾ ಮಕ್ಕಳು ಶರಣರ ವಚನಗಳನ್ನು ಹೇಳಿದರು.</p>.<p>ವೀರಣ್ಣ ಪರಾಂಡೆ, ಚನ್ನಬಸಪ್ಪ ಮಸೂತಿ, ರಾಮಲಿಂಗಪ್ಪ ನವಲಗುಂದ, ಕಾಶಪ್ಪ ದೊಡವಾಡ, ಫಕ್ಕೀರಪ್ಪ ಮಡಿವಾಳರ, ಸಂಜು ಕೊಡಿಮಠ, ಸಿದ್ರಾಯಪ್ಪ ವಾಲಿ, ಸುರೇಶಬಾಬು ತಳವಾರ, ಕಲಾವತಿ ಮಸೂತಿ, ಸುನಂದಾ ಮಡಿವಾಳರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಪ್ಪಿನಬೆಟಗೇರಿ</strong>: ‘ಮನುಷ್ಯನ ಪ್ರತಿ ಸಮಸ್ಯೆಗೆ ಶರಣರ ವಚನಗಳಲ್ಲಿ ಪರಿಹಾರವಿದ್ದು, ನಾವೆಲ್ಲ ಶರಣ ಸಂಸ್ಕೃತಿಯ ಅಧ್ಯಯನ ಮಾಡುವ ಅಗತ್ಯವಿದೆ’ ಎಂದು ಸ್ಥಳೀಯ ಮೂರುಸಾವಿರ ವಿರಕ್ತಮಠದ ಕುಮಾರ ವಿರೂಪಾಕ್ಷ ಸ್ವಾಮೀಜಿ ಹೇಳಿದರು.</p>.<p>ಗ್ರಾಮದ ಮೂರುಸಾವಿರ ವಿರಕ್ತಮಠದಲ್ಲಿ ಅಕ್ಕನ ಬಳಗ ಮತ್ತು ಗೆಳೆಯರ ಬಳಗದಿಂದ ಗುರುವಾರ ಜರುಗಿದ ಮಾಸಿಕ ಶಿವಾನುಭವ ಗೋಷ್ಠಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>‘ಪ್ರತಿ ತಿಂಗಳು ಹುಣ್ಣಿಮೆ ದಿನ ನಡೆಯುವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವ್ಯಕ್ತಿಗಳನ್ನು ಗುರುತಿಸಿ ಗೌರವಿಸಲಾಗುತ್ತಿದೆ’ ಎಂದರು.</p>.<p>ಸನ್ಮಾನ ಸ್ವೀಕರಿಸಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ವಿದ್ವಾಂಸ ಶ್ರೀಶೈಲ ಹುದ್ದಾರ ಮಾತನಾಡಿ, ‘ಮಾತೃ ಭಾಷಾ ಕಲಿಕೆಯಿಂದ ಮಾತ್ರ ಈ ನೆಲದ ಸೊಗಡು ಉಳಿಯಲು ಸಾಧ್ಯ. ಆಧುನಿಕತೆಯ ಭರಾಟೆಯಲ್ಲಿ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವುದು ಎಲ್ಲರ ಕರ್ತವ್ಯ. ನಮ್ಮ ಭಾಷೆ ಕನ್ನಡವಾಗಿದ್ದರೂ ನಿತ್ಯವೂ ಅನ್ಯ ಭಾಷೆ ಬಳಸುವುದು ಕಳವಳಕಾರಿ ಸಂಗತಿ’ ಎಂದರು.</p>.<p>ಗ್ರಾಮದ ನಾಗಪ್ಪ ಪೂಜಾರ, ಪತ್ರಕರ್ತ ಪ್ರಕಾಶ ಹೂಗಾರ ಅವರನ್ನು ಸನ್ಮಾನಿಸಲಾಯಿತು. ಕಸ್ತೂರಿ ಯಲಿಗಾರ ಅಕ್ಕಮಹಾದೇವಿ ಜೀವನದ ಕುರಿತು ಮಾತನಾಡಿದರು. ಸ್ಥಳೀಯ ಶಾಲಾ ಮಕ್ಕಳು ಶರಣರ ವಚನಗಳನ್ನು ಹೇಳಿದರು.</p>.<p>ವೀರಣ್ಣ ಪರಾಂಡೆ, ಚನ್ನಬಸಪ್ಪ ಮಸೂತಿ, ರಾಮಲಿಂಗಪ್ಪ ನವಲಗುಂದ, ಕಾಶಪ್ಪ ದೊಡವಾಡ, ಫಕ್ಕೀರಪ್ಪ ಮಡಿವಾಳರ, ಸಂಜು ಕೊಡಿಮಠ, ಸಿದ್ರಾಯಪ್ಪ ವಾಲಿ, ಸುರೇಶಬಾಬು ತಳವಾರ, ಕಲಾವತಿ ಮಸೂತಿ, ಸುನಂದಾ ಮಡಿವಾಳರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>