<p><strong>ಧಾರವಾಡ:</strong> ‘ಮಕ್ಕಳು ಬದುಕಿನಲ್ಲಿ ಯಶಸ್ವಿಯಾಗಲು ಪೋಷಕರು ಅವರಿಗೆ ಬಾಲ್ಯದಿಂದಲೇ ಉತ್ತಮ ಸಂಸ್ಕಾರ ಕಲಿಸಬೇಕು’ ಎಂದು ಶೃಂಗೇರಿಯ ವಿಧುಶೇಖರ ಭಾರತೀ ಸ್ವಾಮೀಜಿ ಹೇಳಿದರು.</p><p>ನಗರದ ಯಾಲಕ್ಕಿಶೆಟ್ಟರ ಕಾಲೊನಿಯ ಶೃಂಗೇರಿ ಶಂಕರಾಚಾರ್ಯ ಮಠದ ವಿದ್ಯಾಭಾರತೀ ಸಭಾಭವನದಲ್ಲಿ ಬುಧವಾರ ನಡೆದ ಅಖಿಲ ಕರ್ನಾಟಕ ರಾಜ್ಯಮಟ್ಟದ ಶುಕ್ಲ ಯಜುರ್ವೇದಿಯರ ರಾಜ್ಯಮಟ್ಟದ ವಿಪ್ರೋತ್ಸವದಲ್ಲಿ ಮಾತನಾಡಿದರು. </p><p>‘ಸಂಸ್ಕಾರ ಕಲಿಸುವುದರಿಂದ ಮಕ್ಕಳ ಮನಸ್ಸು ದೃಢವಾಗುತ್ತದೆ. ಅವರಿಗೆ ಅಧ್ಯಯನ ಮಾಡಲು ಪ್ರೇರಣೆ ನೀಡುತ್ತದೆ. ಉತ್ತಮ ಸಂಸ್ಕಾರ ಕಲಿತ ಮಕ್ಕಳು, ಪೋಷಕರನ್ನು ವೃದ್ಧಾಪ್ಯದಲ್ಲಿ ಆರೈಕೆ ಮಾಡುತ್ತಾರೆ. ದೇಶದ ಪರಂಪರೆಯನ್ನು ಮಕ್ಕಳಿಗೆ ತಿಳಿಸಬೇಕು. ಸಂಸ್ಕಾರ ಕ್ರಮ ಮತ್ತು ಶಿಸ್ತು ರೂಢಿಸಬೇಕು’ ಎಂದರು.</p><p>‘ನಮ್ಮ ಪರಂಪರೆಯ ದಾರಿಯಲ್ಲಿ ಮುನ್ನಡೆಯಬೇಕು. ಶ್ರದ್ಧೆಯಿಂದ ಸಾಗಿದರೆ ಯಶಸ್ಸು ಸಿಗುತ್ತದೆ’ ಎಂದು ತಿಳಿಸಿದರು.</p><p>ಅಖಿಲ ಭಾರತ ಬ್ರಾಹ್ಮಣ ಕ್ಷೇಮಾಭಿವೃದ್ಧಿ ಮಹಾಸಭೆಯ ನಿಧಿ ಉದ್ಘಾಟನೆ ನೆರವೇರಿಸಿದರು.</p><p>ಸಮ್ಮೇಳನ ಸಮಿತಿ ಅಧ್ಯಕ್ಷ ಜಿ.ಕೆ.ಕುಲಕರ್ಣಿ, ಕಾರ್ಯಾಧ್ಯಕ್ಷ ಸಿ.ಆರ್.ಜೋಶಿ, ಶಂಕರ ಭಟ್ ಜೋಶಿ, ಅನಂತ ಕುಲಕರ್ಣಿ, ವೆಂಕಟೇಶ ಶಿವಪೂಜಿ, ಸಿ.ಎಂ.ದೀಕ್ಷಿತ, ಅಶೋಕ ಕುಲಕರ್ಣಿ, ಮಹಾಬಳೇಶ ಜೋಶಿ, ರಮೇಶ ಭಟ್ಟ, ಎಲ್.ಸಿ.ಕುಲಕರ್ಣಿ, ಉಮೇಶ ಪಾಟೀಲ, ಶಂಕರ ಪಾಟೀಲ ಇದ್ದರು.</p><h2>ಯುವಜನರಿಗೆ ಹಿರಿಯರು ಮಾರ್ಗದರ್ಶನ ನೀಡಲು ಸಲಹೆ</h2><h2></h2><p>‘ಯುವಜನರು ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು ಸಮಾಜದ ಹಿರಿಯರು ಮಾರ್ಗದರ್ಶನ ನೀಡಬೇಕು. ಅವರು ಆರ್ಥಿಕವಾಗಿ ಸದೃಢರಾಗುವಂತೆ ಮಾಡಬೇಕು’ ಎಂದು ಅಖಿಲ ಭಾರತ ಬ್ರಾಹ್ಮಣ ಸಂಘದ ಅಧ್ಯಕ್ಷ ಗೋವಿಂದ ಕುಲಕರ್ಣಿ ಹೇಳಿದರು.</p><p>ವಿಪ್ರೋತ್ಸವದಲ್ಲಿ ಬ್ರಾಹ್ಮಣ ಕ್ಷೇಮಾಭಿವೃದ್ಧಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಂಘದಲ್ಲಿ ಸಾವಿರಕ್ಕೂ ಹೆಚ್ಚು ಕೈಗಾರಿಕೋದ್ಯಮಿಗಳು ಇದ್ದಾರೆ. ಸಮುದಾಯದ ಯುವಜನರಿಗೆ ನವೋದ್ಯಮ ಘಟಕ ಸ್ಥಾಪಿಸಲು ಉತ್ತೇಜನ ನೀಡಲಾಗುತ್ತಿದೆ’ ಎಂದರು.</p><p>‘ಈಗಾಗಲೇ ಹಲವರು ಉದ್ಯೋಗಗಳಲ್ಲಿ ತೊಡಗಿಕೊಂಡಿದ್ಧಾರೆ. ಮುಂದಿನ 10 ವರ್ಷಗಳಲ್ಲಿ ಒಂದು ಲಕ್ಷ ಯುವಜನರಿಗೆ ಸ್ವಉದ್ಯೋಗ ಕಲ್ಪಿಸುವ ಗುರಿ ಇದೆ’ ಎಂದು ತಿಳಿಸಿದರು.</p><p>ಕೆಂಗೇರಿ ಮುರಗೋಡ ಚಿದಂಬರ ಮಠದ ದಿವಾಕರ ದೀಕ್ಷಿತ್ ಸಾನ್ನಿಧ್ಯ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ‘ಮಕ್ಕಳು ಬದುಕಿನಲ್ಲಿ ಯಶಸ್ವಿಯಾಗಲು ಪೋಷಕರು ಅವರಿಗೆ ಬಾಲ್ಯದಿಂದಲೇ ಉತ್ತಮ ಸಂಸ್ಕಾರ ಕಲಿಸಬೇಕು’ ಎಂದು ಶೃಂಗೇರಿಯ ವಿಧುಶೇಖರ ಭಾರತೀ ಸ್ವಾಮೀಜಿ ಹೇಳಿದರು.</p><p>ನಗರದ ಯಾಲಕ್ಕಿಶೆಟ್ಟರ ಕಾಲೊನಿಯ ಶೃಂಗೇರಿ ಶಂಕರಾಚಾರ್ಯ ಮಠದ ವಿದ್ಯಾಭಾರತೀ ಸಭಾಭವನದಲ್ಲಿ ಬುಧವಾರ ನಡೆದ ಅಖಿಲ ಕರ್ನಾಟಕ ರಾಜ್ಯಮಟ್ಟದ ಶುಕ್ಲ ಯಜುರ್ವೇದಿಯರ ರಾಜ್ಯಮಟ್ಟದ ವಿಪ್ರೋತ್ಸವದಲ್ಲಿ ಮಾತನಾಡಿದರು. </p><p>‘ಸಂಸ್ಕಾರ ಕಲಿಸುವುದರಿಂದ ಮಕ್ಕಳ ಮನಸ್ಸು ದೃಢವಾಗುತ್ತದೆ. ಅವರಿಗೆ ಅಧ್ಯಯನ ಮಾಡಲು ಪ್ರೇರಣೆ ನೀಡುತ್ತದೆ. ಉತ್ತಮ ಸಂಸ್ಕಾರ ಕಲಿತ ಮಕ್ಕಳು, ಪೋಷಕರನ್ನು ವೃದ್ಧಾಪ್ಯದಲ್ಲಿ ಆರೈಕೆ ಮಾಡುತ್ತಾರೆ. ದೇಶದ ಪರಂಪರೆಯನ್ನು ಮಕ್ಕಳಿಗೆ ತಿಳಿಸಬೇಕು. ಸಂಸ್ಕಾರ ಕ್ರಮ ಮತ್ತು ಶಿಸ್ತು ರೂಢಿಸಬೇಕು’ ಎಂದರು.</p><p>‘ನಮ್ಮ ಪರಂಪರೆಯ ದಾರಿಯಲ್ಲಿ ಮುನ್ನಡೆಯಬೇಕು. ಶ್ರದ್ಧೆಯಿಂದ ಸಾಗಿದರೆ ಯಶಸ್ಸು ಸಿಗುತ್ತದೆ’ ಎಂದು ತಿಳಿಸಿದರು.</p><p>ಅಖಿಲ ಭಾರತ ಬ್ರಾಹ್ಮಣ ಕ್ಷೇಮಾಭಿವೃದ್ಧಿ ಮಹಾಸಭೆಯ ನಿಧಿ ಉದ್ಘಾಟನೆ ನೆರವೇರಿಸಿದರು.</p><p>ಸಮ್ಮೇಳನ ಸಮಿತಿ ಅಧ್ಯಕ್ಷ ಜಿ.ಕೆ.ಕುಲಕರ್ಣಿ, ಕಾರ್ಯಾಧ್ಯಕ್ಷ ಸಿ.ಆರ್.ಜೋಶಿ, ಶಂಕರ ಭಟ್ ಜೋಶಿ, ಅನಂತ ಕುಲಕರ್ಣಿ, ವೆಂಕಟೇಶ ಶಿವಪೂಜಿ, ಸಿ.ಎಂ.ದೀಕ್ಷಿತ, ಅಶೋಕ ಕುಲಕರ್ಣಿ, ಮಹಾಬಳೇಶ ಜೋಶಿ, ರಮೇಶ ಭಟ್ಟ, ಎಲ್.ಸಿ.ಕುಲಕರ್ಣಿ, ಉಮೇಶ ಪಾಟೀಲ, ಶಂಕರ ಪಾಟೀಲ ಇದ್ದರು.</p><h2>ಯುವಜನರಿಗೆ ಹಿರಿಯರು ಮಾರ್ಗದರ್ಶನ ನೀಡಲು ಸಲಹೆ</h2><h2></h2><p>‘ಯುವಜನರು ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು ಸಮಾಜದ ಹಿರಿಯರು ಮಾರ್ಗದರ್ಶನ ನೀಡಬೇಕು. ಅವರು ಆರ್ಥಿಕವಾಗಿ ಸದೃಢರಾಗುವಂತೆ ಮಾಡಬೇಕು’ ಎಂದು ಅಖಿಲ ಭಾರತ ಬ್ರಾಹ್ಮಣ ಸಂಘದ ಅಧ್ಯಕ್ಷ ಗೋವಿಂದ ಕುಲಕರ್ಣಿ ಹೇಳಿದರು.</p><p>ವಿಪ್ರೋತ್ಸವದಲ್ಲಿ ಬ್ರಾಹ್ಮಣ ಕ್ಷೇಮಾಭಿವೃದ್ಧಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಂಘದಲ್ಲಿ ಸಾವಿರಕ್ಕೂ ಹೆಚ್ಚು ಕೈಗಾರಿಕೋದ್ಯಮಿಗಳು ಇದ್ದಾರೆ. ಸಮುದಾಯದ ಯುವಜನರಿಗೆ ನವೋದ್ಯಮ ಘಟಕ ಸ್ಥಾಪಿಸಲು ಉತ್ತೇಜನ ನೀಡಲಾಗುತ್ತಿದೆ’ ಎಂದರು.</p><p>‘ಈಗಾಗಲೇ ಹಲವರು ಉದ್ಯೋಗಗಳಲ್ಲಿ ತೊಡಗಿಕೊಂಡಿದ್ಧಾರೆ. ಮುಂದಿನ 10 ವರ್ಷಗಳಲ್ಲಿ ಒಂದು ಲಕ್ಷ ಯುವಜನರಿಗೆ ಸ್ವಉದ್ಯೋಗ ಕಲ್ಪಿಸುವ ಗುರಿ ಇದೆ’ ಎಂದು ತಿಳಿಸಿದರು.</p><p>ಕೆಂಗೇರಿ ಮುರಗೋಡ ಚಿದಂಬರ ಮಠದ ದಿವಾಕರ ದೀಕ್ಷಿತ್ ಸಾನ್ನಿಧ್ಯ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>