ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಸ್ಯುಸಿಐ–ಸಿ ಪಕ್ಷವು ಮೂರು ದಶಕಗಳಿಂದ ಜಿಲ್ಲೆಯಲ್ಲಿ ಹಲವಾರು ಜನಪರ, ಕಾರ್ಮಿಕ, ಮಹಿಳಾ ಹಾಗೂ ರೈತ ಹೋರಾಟಗಳನ್ನು ನಡೆಸಿದೆ. ದೇಶದ 20 ರಾಜ್ಯಗಳು ಹಾಗೂ ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ 119 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ರಾಜ್ಯದ ಧಾರವಾಡ, ಬೆಂಗಳೂರು ಗ್ರಾಮೀಣ, ದಾವಣಗೆರೆ, ಬಳ್ಳಾರಿ, ರಾಯಚೂರು–ಯಾದಗಿರಿ, ಮೈಸೂರು–ಕೊಡಗು ಹಾಗೂ ಕಲಬುರಗಿ ಕ್ಷೇತ್ರಗಳಿಂದಲೂ ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ’ ಎಂದರು.