‘ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದಿದ್ದ ಅವಳು, ಖಾಸಗಿ ಕಾಲೇಜೊಂದರಲ್ಲಿ ವಿಜ್ಞಾನ ವಿಭಾಗದಲ್ಲಿ ಅಧ್ಯಯನ ಮಾಡುತ್ತಿದ್ದಳು. ಅಲ್ಲಿ ಕಡಿಮೆ ಅಂಕ ಬಂದಿದೆಯೆಂದು ಪಾಲಕರು ಬೇರೊಂದು ಕಾಲೇಜಿಗೆ ಸೇರಿಸಿದ್ದರು. ಅಲ್ಲಿಯ ವಾತಾವರಣ ಸರಿಯಿಲ್ಲ ಎಂದು ಮೊದಲಿನ ಕಾಲೇಜಿಗೇ ಸೇರಿಸಲು ಒತ್ತಾಯ ಮಾಡುತ್ತಿದ್ದಳು. ಅಲ್ಲದೆ, ಆರೋಗ್ಯದಲ್ಲೂ ಸಮಸ್ಯೆ ಅನುಭವಿಸುತ್ತಿದ್ದ ಅವಳು ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪಾಲಕರು ದೂರಿನಲ್ಲಿ ತಿಳಿಸಿದ್ದಾರೆ’ ಎಂದು ಇನ್ಸ್ಪೆಕ್ಟರ್ ರವಿಚಂದ್ರನ್ ಬಡಾಫಕ್ಕೀರಪ್ಪನವರ ತಿಳಿಸಿದರು.