ಶುಕ್ರವಾರ, 14 ನವೆಂಬರ್ 2025
×
ADVERTISEMENT
ADVERTISEMENT

ಹುಬ್ಬಳ್ಳಿ: ಸಕ್ಕರೆ ಕಾರ್ಖಾನೆ ಇಲ್ಲದೆ ಸಂಕಷ್ಟದಲ್ಲಿ ಕಬ್ಬು ಬೆಳೆಗಾರರು

Published : 14 ನವೆಂಬರ್ 2025, 4:47 IST
Last Updated : 14 ನವೆಂಬರ್ 2025, 4:47 IST
ಫಾಲೋ ಮಾಡಿ
Comments
ಕಬ್ಬು ಬೆಳೆಗಾರರು ಹೆಚ್ಚು ಇಳುವರಿ ನೀಡುವ ಕಬ್ಬಿನ ತಳಿ ಬೆಳೆಯಬೇಕು. ತಂತ್ರಜ್ಞಾನ ಬಳಸಬೇಕು. ಇಲಾಖೆಯಿಂದ ತರಬೇತಿ ಯಂತ್ರಗಳು ನೆರವು ನೀಡಲಾಗುತ್ತಿದೆ
ಮಂಜುನಾಥ ಅಂತರವಳ್ಳಿ ಜಂಟಿ ನಿರ್ದೇಶಕ ಕೃಷಿ ಇಲಾಖೆ
ಧಾರವಾಡ ಜಿಲ್ಲೆಯಲ್ಲಿ ಸಕ್ಕರೆ ಕಾರ್ಖಾನೆ ನಿರ್ಮಾಣ ಸಂಬಂಧ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲು ಇಲಾಖೆಗೆ ಅವಕಾಶವಿಲ್ಲ. ಕಾರ್ಖಾನೆ ಸ್ಥಾಪನೆಗೆ ಯಾರೂ ಅರ್ಜಿ ಸಲ್ಲಿಸಿಲ್ಲ
ಶಿವಪುತ್ರಪ್ಪ ಜಂಟಿ ನಿರ್ದೇಶಕ ಜಿಲ್ಲಾ ಕೈಗಾರಿಕಾ ಕೇಂದ್ರ
‘ಸರ್ಕಾರಕ್ಕೆ ಶೀಘ್ರ ಪ್ರಸ್ತಾವ’
‘ಜಿಲ್ಲೆಯಲ್ಲಿ ಕಬ್ಬು ಬೆಳೆಯುವ ಪ್ರಮಾಣ ಹೆಚ್ಚಬೇಕು. ಈ ನಿಟ್ಟಿನಲ್ಲಿ ರೈತರಿಗೆ ಜಾಗೃತಿ ಮೂಡಿಸಬೇಕು. ಬೆಳೆ ಹೆಚ್ಚಿದರೆ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಅನುಕೂಲವಾಗುತ್ತದೆ. ಸ್ಥಳೀಯವಾಗಿ ಮಾತ್ರವಲ್ಲದೆ ಬೇರೆ ಜಿಲ್ಲೆಗಳಿಂದಲೂ ಕಬ್ಬನ್ನು ಇಲ್ಲಿಗೆ ತರುತ್ತಾರೆ. ಕೈಗಾರಿಕಾ ಸ್ಥಾಪನೆಗೆ ಅನುಕೂಲಕರ ವಾತಾವರಣವನ್ನೂ ನಿರ್ಮಿಸಬೇಕಿದೆ. ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು’ ಎಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಜಿ.ಕೆ.ಆದಪ್ಪಗೌಡರ ತಿಳಿಸಿದರು. ‘ಸಾಕಷ್ಟು ಪ್ರಮಾಣದಲ್ಲಿ ನೀರಿನ ವ್ಯವಸ್ಥೆ ಗುಣಮಟ್ಟದ ಬೆಳೆಗೂ ಆದ್ಯತೆ ನೀಡಬೇಕಿದೆ. ಕೈಗಾರಿಕಾ ನಿಯಮಗಳನ್ನು ಸರಳಗೊಳಿಸಬೇಕಿದೆ. ಸಕ್ಕರೆ ಕಾರ್ಖಾನೆ ಸ್ಥಾಪನೆಯಾದಲ್ಲಿ ಇತರೆ ವ್ಯಾಪಾರವೂ ಬೆಳೆಯುತ್ತದೆ’ ಎಂದು ಉದ್ಯಮಿ ವಿನಯ ಜವಳಿ ಹೇಳಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT