<p><strong>ಧಾರವಾಡ:</strong> ನಗರದ ಕೃಷಿ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ನಡೆಯಬೇಕಿದ್ದ ಕೃಷಿ ಮಹಾ ವಿದ್ಯಾಲಯದ ವಿದ್ಯಾರ್ಥಿ ಸಂಘದ ಪದಗ್ರಹಣ ಸಮಾರಂಭ ಕೊನೆ ಕ್ಷಣದಲ್ಲಿ ರದ್ದಾಗಿದೆ. ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಕ್ಕೆ ದಲಿತ ಸಂಘಟನೆಯವರು ಆಕ್ಷೇಪ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದರು. </p><p>ದಲಿತ ಸಂಘಟನೆಯವರು ವಿಶ್ವವಿದ್ಯಾಲಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿದ್ದ ಪರಮೇಶ್ವರ ಕಾಳೆ, ಕೃಷ್ಣ ಗುಮ್ಮಗೋಳ ಮೊದಲಾದವರನ್ನು ಪೊಲೀಸರು ವಶಕ್ಕೆ (ಮುಂಜಾಗ್ರತಾ ಕ್ರಮವಾಗಿ) ಪಡೆದು, ಸ್ವಲ್ಪ ಹೊತ್ತಿನ ನಂತರ ಬಿಡುಗಡೆಗೊಳಿಸಿದರು. </p><p>ಕೃಷಿ ಮಹಾ ವಿದ್ಯಾಲಯದ ವಿದ್ಯಾರ್ಥಿ ಸಂಘದ ಪದಗ್ರಹಣ ಡಿ.30 ಸಮಾರಂಭ ನಡೆಯಬೇಕಿತ್ತು. ಆದರೆ ಚಕ್ರವರ್ತಿ ಸೂಲಿಬೆಲೆ ಅವರು ಭಾಗವಹಿಸುವುದಕ್ಕೆ ದಲಿತ ಸಂಘಟನೆಯವರಿಂದ ಆಕ್ಷೇಪ ವ್ಯಕ್ತವಾಯಿತು. ಪದಗ್ರಹಣ ಸಮಾರಂಭವನ್ನು ಕಾರಣಾಂತರಗಳಿಂದ ರದ್ದುಪಡಿಸಲಾಗಿದೆ ಎಂದು ಕೃಷಿ ಮಹಾವಿದ್ಯಾಲಯದ ಡೀನ್ ಅವರು ಪ್ರಕಟಣೆ ಹೊರಡಿಸಿದರು. </p><p>‘ಅದು ವಿದ್ಯಾರ್ಥಿ ಸಂಘಟನೆಯ ಕಾರ್ಯಕ್ರಮ. ವಿದ್ಯಾರ್ಥಿಗಳೇ ಅತಿಥಿಯನ್ನು ಆಹ್ವಾನಿಸಿದ್ದರು. ಅದಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಹೀಗಾಗಿ ಸಮಾರಂಭ ರದ್ದಾಗಿದೆ. ನಾನು ಊರಿನಲ್ಲಿ ಇರಲಿಲ್ಲ’ ಎಂದು ಕೃಷಿ ವಿ.ವಿ ಕುಲಪತಿ ಪ್ರೊ.ಪಿ.ಎಲ್.ಪಾಟೀಲ ‘ಪ್ರಜಾವಾಣಿ’ಗೆ ತಿಳಿಸಿದರು. </p><p>‘ಕಾರ್ಯಕ್ರಮದಲ್ಲಿ ಸೂಲಿಬೆಲೆ ಅವರು ಪಾಲ್ಗೊಳ್ಳುವುದಕ್ಕೆ ಕೆಲವರು ಆಕ್ಷೇಪ ವ್ಯಕ್ತ ಪ್ರತಿಭಟನೆಗೆ ಮುಂದಾದರು. ಹೀಗಾಗಿ ಅವರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದು ಸ್ವಲ್ಪ ಹೊತ್ತಿನ ನಂತರ ಬಿಡುಗಡೆ ಮಾಡಲಾಯಿತು’ ಎಂದು ಉಪನಗರ ಠಾಣೆ ಪೊಲೀಸರು ತಿಳಿಸಿದ್ಧಾರೆ. </p><p>‘ಚಕ್ರವರ್ತಿ ಸೂಲಿಬೆಲೆ ಅವರು ಕೃಷಿ ತಜ್ಞರಲ್ಲ, ಕೃಷಿ ವಿಜ್ಞಾನಿಯಲ್ಲ. ಕೃಷಿ ಚಟುವಟಿಕೆ ಬಗ್ಗೆ ಅವರಿಗೇನು ಗೊತ್ತಿದೆ? ಕೃಷಿ ವಿದ್ಯಾಲಯದ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದೆವು’ ಎಂದು ಮುಖಂಡ ಪರಮೇಶ್ವರ ಕಾಳೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ನಗರದ ಕೃಷಿ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ನಡೆಯಬೇಕಿದ್ದ ಕೃಷಿ ಮಹಾ ವಿದ್ಯಾಲಯದ ವಿದ್ಯಾರ್ಥಿ ಸಂಘದ ಪದಗ್ರಹಣ ಸಮಾರಂಭ ಕೊನೆ ಕ್ಷಣದಲ್ಲಿ ರದ್ದಾಗಿದೆ. ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಕ್ಕೆ ದಲಿತ ಸಂಘಟನೆಯವರು ಆಕ್ಷೇಪ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದರು. </p><p>ದಲಿತ ಸಂಘಟನೆಯವರು ವಿಶ್ವವಿದ್ಯಾಲಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿದ್ದ ಪರಮೇಶ್ವರ ಕಾಳೆ, ಕೃಷ್ಣ ಗುಮ್ಮಗೋಳ ಮೊದಲಾದವರನ್ನು ಪೊಲೀಸರು ವಶಕ್ಕೆ (ಮುಂಜಾಗ್ರತಾ ಕ್ರಮವಾಗಿ) ಪಡೆದು, ಸ್ವಲ್ಪ ಹೊತ್ತಿನ ನಂತರ ಬಿಡುಗಡೆಗೊಳಿಸಿದರು. </p><p>ಕೃಷಿ ಮಹಾ ವಿದ್ಯಾಲಯದ ವಿದ್ಯಾರ್ಥಿ ಸಂಘದ ಪದಗ್ರಹಣ ಡಿ.30 ಸಮಾರಂಭ ನಡೆಯಬೇಕಿತ್ತು. ಆದರೆ ಚಕ್ರವರ್ತಿ ಸೂಲಿಬೆಲೆ ಅವರು ಭಾಗವಹಿಸುವುದಕ್ಕೆ ದಲಿತ ಸಂಘಟನೆಯವರಿಂದ ಆಕ್ಷೇಪ ವ್ಯಕ್ತವಾಯಿತು. ಪದಗ್ರಹಣ ಸಮಾರಂಭವನ್ನು ಕಾರಣಾಂತರಗಳಿಂದ ರದ್ದುಪಡಿಸಲಾಗಿದೆ ಎಂದು ಕೃಷಿ ಮಹಾವಿದ್ಯಾಲಯದ ಡೀನ್ ಅವರು ಪ್ರಕಟಣೆ ಹೊರಡಿಸಿದರು. </p><p>‘ಅದು ವಿದ್ಯಾರ್ಥಿ ಸಂಘಟನೆಯ ಕಾರ್ಯಕ್ರಮ. ವಿದ್ಯಾರ್ಥಿಗಳೇ ಅತಿಥಿಯನ್ನು ಆಹ್ವಾನಿಸಿದ್ದರು. ಅದಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಹೀಗಾಗಿ ಸಮಾರಂಭ ರದ್ದಾಗಿದೆ. ನಾನು ಊರಿನಲ್ಲಿ ಇರಲಿಲ್ಲ’ ಎಂದು ಕೃಷಿ ವಿ.ವಿ ಕುಲಪತಿ ಪ್ರೊ.ಪಿ.ಎಲ್.ಪಾಟೀಲ ‘ಪ್ರಜಾವಾಣಿ’ಗೆ ತಿಳಿಸಿದರು. </p><p>‘ಕಾರ್ಯಕ್ರಮದಲ್ಲಿ ಸೂಲಿಬೆಲೆ ಅವರು ಪಾಲ್ಗೊಳ್ಳುವುದಕ್ಕೆ ಕೆಲವರು ಆಕ್ಷೇಪ ವ್ಯಕ್ತ ಪ್ರತಿಭಟನೆಗೆ ಮುಂದಾದರು. ಹೀಗಾಗಿ ಅವರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದು ಸ್ವಲ್ಪ ಹೊತ್ತಿನ ನಂತರ ಬಿಡುಗಡೆ ಮಾಡಲಾಯಿತು’ ಎಂದು ಉಪನಗರ ಠಾಣೆ ಪೊಲೀಸರು ತಿಳಿಸಿದ್ಧಾರೆ. </p><p>‘ಚಕ್ರವರ್ತಿ ಸೂಲಿಬೆಲೆ ಅವರು ಕೃಷಿ ತಜ್ಞರಲ್ಲ, ಕೃಷಿ ವಿಜ್ಞಾನಿಯಲ್ಲ. ಕೃಷಿ ಚಟುವಟಿಕೆ ಬಗ್ಗೆ ಅವರಿಗೇನು ಗೊತ್ತಿದೆ? ಕೃಷಿ ವಿದ್ಯಾಲಯದ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದೆವು’ ಎಂದು ಮುಖಂಡ ಪರಮೇಶ್ವರ ಕಾಳೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>