<p><strong>ನವಲಗುಂದ (ಧಾರವಾಡ ಜಿಲ್ಲೆ): </strong>ಮಹದಾಯಿ ಹಾಗೂ ಕಳಸಾ ಬಂಡೂರಿ ಹೋರಾಟದಲ್ಲಿ ಪಾಲ್ಗೊಂಡಿದ್ದ ರೈತರ ಮೇಲಿನ ಎಲ್ಲ ಪ್ರಕರಣಗಳನ್ನು ಹಿಂಪಡೆಯಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿತ್ತು. ಆದರೆ, ಈಗ ಹೋರಾಟಗಾರರಿಗೆ ಇಲ್ಲಿಯ ಹಿರಿಯ ದಿವಾಣಿ ನ್ಯಾಯಾಲಯದಿಂದ ಮತ್ತೆ ಸಮನ್ಸ್ ಜಾರಿಯಾಗಿದೆ.</p>.<p>ಕಳಸಾ–ಬಂಡೂರಿ ನಾಲೆ ಜೋಡಣೆಗಾಗಿ ನಡೆದ ಹೋರಾಟದಲ್ಲಿ ಪಾಲ್ಗೊಂಡಿದ್ದ ತಾಲ್ಲೂಕಿನ ಪಡೆಸೂರ ಗ್ರಾಮದ ರಮೇಶ ವೆಂಕರಡ್ಡಿ ನವಲಗುಂದ ಅವರಿಗೆ ಡಿ.7ರಂದು ತಪ್ಪದೇ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದು, ರೈತ ರಮೇಶ ಆತಂಕ ವ್ಯಕ್ತಪಡಿಸಿದ್ದಾರೆ.</p>.<p>‘ಹೋರಾಟಗಾರರ ಮೇಲಿನ ಎಲ್ಲ ಪ್ರಕರಣಗಳನ್ನು ಹಿಂಪಡೆಯಲಾಗಿದೆ ಎಂದು ಸರ್ಕಾರ ಹೇಳಿತ್ತು. ಆದರೆ, ಸಮನ್ಸ್ ಬಂದಿರುವುದು ಆಶ್ಚರ್ಯ ಮೂಡಿಸಿದೆ. ಈ ಬಗ್ಗೆ ವಕೀಲರೊಂದಿಗೆ ಚರ್ಚಿಸಿದಾಗ ಪ್ರಕರಣ ಮುಕ್ತಾಯವಾಗಿದೆ ಎಂದು ಕಂಪ್ಯೂಟರ್ನಲ್ಲಿ ತೋರಿಸುತ್ತಿದೆ. ಆದರೆ, ಪೊಲೀಸರು ನ್ಯಾಯಾಲಯಕ್ಕೆ ಖುದ್ದು ಹಾಜರಾಗಲೇಬೇಕು ಎಂದು ಹೇಳುತ್ತಿದ್ದಾರೆ’ ಎಂದಿದ್ದಾರೆ.</p>.<p>‘ನಮ್ಮೂರಿನಲ್ಲಿ ಒಟ್ಟು ಇಬ್ಬರಿಗೆ ಸಮನ್ಸ್ ಬಂದಿದೆ. ನ್ಯಾಯಾಲಯಕ್ಕೆ ಹಾಜರಾಗುವುದಿಲ್ಲ. ಬೇಕಾದರೆ ಬಂಧಿಸಿ, ಜೈಲಿಗೆ ಹಾಕಲಿ. ನಾವು ಎಲ್ಲದ್ದಕ್ಕೂ ಸಿದ್ಧ’ ಎಂದು ಅವರು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವಲಗುಂದ (ಧಾರವಾಡ ಜಿಲ್ಲೆ): </strong>ಮಹದಾಯಿ ಹಾಗೂ ಕಳಸಾ ಬಂಡೂರಿ ಹೋರಾಟದಲ್ಲಿ ಪಾಲ್ಗೊಂಡಿದ್ದ ರೈತರ ಮೇಲಿನ ಎಲ್ಲ ಪ್ರಕರಣಗಳನ್ನು ಹಿಂಪಡೆಯಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿತ್ತು. ಆದರೆ, ಈಗ ಹೋರಾಟಗಾರರಿಗೆ ಇಲ್ಲಿಯ ಹಿರಿಯ ದಿವಾಣಿ ನ್ಯಾಯಾಲಯದಿಂದ ಮತ್ತೆ ಸಮನ್ಸ್ ಜಾರಿಯಾಗಿದೆ.</p>.<p>ಕಳಸಾ–ಬಂಡೂರಿ ನಾಲೆ ಜೋಡಣೆಗಾಗಿ ನಡೆದ ಹೋರಾಟದಲ್ಲಿ ಪಾಲ್ಗೊಂಡಿದ್ದ ತಾಲ್ಲೂಕಿನ ಪಡೆಸೂರ ಗ್ರಾಮದ ರಮೇಶ ವೆಂಕರಡ್ಡಿ ನವಲಗುಂದ ಅವರಿಗೆ ಡಿ.7ರಂದು ತಪ್ಪದೇ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದು, ರೈತ ರಮೇಶ ಆತಂಕ ವ್ಯಕ್ತಪಡಿಸಿದ್ದಾರೆ.</p>.<p>‘ಹೋರಾಟಗಾರರ ಮೇಲಿನ ಎಲ್ಲ ಪ್ರಕರಣಗಳನ್ನು ಹಿಂಪಡೆಯಲಾಗಿದೆ ಎಂದು ಸರ್ಕಾರ ಹೇಳಿತ್ತು. ಆದರೆ, ಸಮನ್ಸ್ ಬಂದಿರುವುದು ಆಶ್ಚರ್ಯ ಮೂಡಿಸಿದೆ. ಈ ಬಗ್ಗೆ ವಕೀಲರೊಂದಿಗೆ ಚರ್ಚಿಸಿದಾಗ ಪ್ರಕರಣ ಮುಕ್ತಾಯವಾಗಿದೆ ಎಂದು ಕಂಪ್ಯೂಟರ್ನಲ್ಲಿ ತೋರಿಸುತ್ತಿದೆ. ಆದರೆ, ಪೊಲೀಸರು ನ್ಯಾಯಾಲಯಕ್ಕೆ ಖುದ್ದು ಹಾಜರಾಗಲೇಬೇಕು ಎಂದು ಹೇಳುತ್ತಿದ್ದಾರೆ’ ಎಂದಿದ್ದಾರೆ.</p>.<p>‘ನಮ್ಮೂರಿನಲ್ಲಿ ಒಟ್ಟು ಇಬ್ಬರಿಗೆ ಸಮನ್ಸ್ ಬಂದಿದೆ. ನ್ಯಾಯಾಲಯಕ್ಕೆ ಹಾಜರಾಗುವುದಿಲ್ಲ. ಬೇಕಾದರೆ ಬಂಧಿಸಿ, ಜೈಲಿಗೆ ಹಾಕಲಿ. ನಾವು ಎಲ್ಲದ್ದಕ್ಕೂ ಸಿದ್ಧ’ ಎಂದು ಅವರು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>