ಭಾರಿಪದ ಕರ್ನಾಟಕ ಉಸ್ತುವಾರಿ ಮಹೇಂದ್ರ ಮಂಕಾಳೆ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ‘ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಕಾರ್ಪೊರೇಟ್ ಕಂಪನಿಗಳಿಗಷ್ಟೇ ಲಾಭವಾಗಿದೆ. ದೇಶದಲ್ಲಿ ಈಗ ಅಘೋಷಿತ ತುರ್ತುಪರಿಸ್ಥಿತಿ ನಿರ್ಮಾಣವಾಗಿದೆ. ಇದರ ವಿರುದ್ಧ ಹೋರಾಡಲು ಧಾರವಾಡ, ವಿಜಯಪುರ ಮತ್ತು ಚಿಕ್ಕೋಡಿ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಬೆಂಬಲ ಪಡೆದು ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ’ ಎಂದರು.