ಈ ಕುರಿತು ಪ್ರತಿಕ್ರಿಯಿಸಿದ ಹುಬ್ಬಳ್ಳಿ– ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತ ಡಾ. ಗೋಪಾಲಕೃಷ್ಣ ಬಿ., ಅವರು, ‘ಸ್ವಚ್ಛ ಸರ್ವೇಕ್ಷಣ ಅಭಿಯಾನದಲ್ಲಿ ಹುಬ್ಬಳ್ಳಿ– ಧಾರವಾಡ ಪಾಲಿಕೆ ಉತ್ತಮ ರ್ಯಾಂಕ್ ಗಳಿಸಿದೆ. ಆದರೆ, ಸುಧಾರಣೆಗೆ ಇನ್ನಷ್ಟು ಅವಕಾಶಗಳಿದ್ದು, ಇದಕ್ಕೆ ನಗರದ ಜನ ಸಹಕಾರ ನೀಡಬೇಕು. ಎಲ್ಲೆಂದರಲ್ಲಿ ಉಗುಳುವುದು, ಕಸ ಎಸೆಯುವುದು ಹಾಗೂ ಹಸಿ ಕಸ ಮತ್ತು ಒಣಕ ಕಸ ವಿಂಗಡಣೆ ಸಮರ್ಪಕವಾಗಿ ಆಗದ ಕಾರಣ ರ್ಯಾಂಕಿಂಗ್ ಮೇಲೆ ಪರಿಣಾಮ ಬೀರಿದೆ’ ಎಂದರು.