<p><strong>ಹುಬ್ಬಳ್ಳಿ</strong>: ‘ಐದು ವರ್ಷದ ಬಾಲಕಿ ಕೊಲೆ ಆರೋಪಿ ರಿತೇಶಕುಮಾರ್ಗೆ ಗುಂಡು ಹೊಡೆದಿದ್ದು ತಪ್ಪು, ಸರಿ ಎಂದು ಹೇಳುತ್ತಿಲ್ಲ. ಆದರೆ, ಆಯೋಗದ ನಿಯಮಾವಳಿ ಪ್ರಕಾರ ವಿಚಾರಣೆಗೆ ಬಂದಿದ್ದೇವೆ’ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ.ಶಾಮ್ ಭಟ್ ಹೇಳಿದರು.</p>.<p>‘ಎಲ್ಲ ವ್ಯಕ್ತಿಗೂ ಜೀವಿಸುವ ಹಕ್ಕು ಇದೆ. ಅದನ್ನು ಯಾರೂ ಕಸಿದುಕೊಳ್ಳಬಾರದು. ಹುಬ್ಬಳ್ಳಿಯ ಪೊಲೀಸರು ಆರೋಪಿಯ ಬದುಕುವ ಹಕ್ಕನ್ನು ಕಿತ್ತುಕೊಂಡಿರುವುದು ಮಾನವ ಹಕ್ಕು ಉಲ್ಲಂಘನೆಯಾಗಿದೆ. ಈ ಹಿನ್ನೆಲೆಯಲ್ಲಿ ಆಯೋಗದಿಂದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಗುಂಡು ಹಾರಿಸುವ ಅಗತ್ಯವಿತ್ತೆ ಎಂಬುದು ಸೇರಿ ಹಲವು ವಿಷಯಗಳ ಬಗ್ಗೆ ತನಿಖೆ ನಡೆಯಲಿದೆ. ಗುಂಡು ಹಾರಿಸಿದ ಪಿಎಸ್ಐ ಅನ್ನಪೂರ್ಣ ವಿಶ್ರಾಂತಿಯಲ್ಲಿದ್ದು, ಅವರನ್ನು ವಿಚಾರಣೆಗೆ ಒಳಪಡಿಸಬೇಕಿದೆ. ಡಿವೈಎಸ್ಪಿ ನೇತೃತ್ವದ ತಂಡ ತನಿಖೆ ನಡೆಸುತ್ತಿದ್ದು, ಎರಡು ತಿಂಗಳಲ್ಲಿ ಆಯೋಗಕ್ಕೆ ವರದಿ ನೀಡಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ಐದು ವರ್ಷದ ಬಾಲಕಿ ಕೊಲೆ ಆರೋಪಿ ರಿತೇಶಕುಮಾರ್ಗೆ ಗುಂಡು ಹೊಡೆದಿದ್ದು ತಪ್ಪು, ಸರಿ ಎಂದು ಹೇಳುತ್ತಿಲ್ಲ. ಆದರೆ, ಆಯೋಗದ ನಿಯಮಾವಳಿ ಪ್ರಕಾರ ವಿಚಾರಣೆಗೆ ಬಂದಿದ್ದೇವೆ’ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ.ಶಾಮ್ ಭಟ್ ಹೇಳಿದರು.</p>.<p>‘ಎಲ್ಲ ವ್ಯಕ್ತಿಗೂ ಜೀವಿಸುವ ಹಕ್ಕು ಇದೆ. ಅದನ್ನು ಯಾರೂ ಕಸಿದುಕೊಳ್ಳಬಾರದು. ಹುಬ್ಬಳ್ಳಿಯ ಪೊಲೀಸರು ಆರೋಪಿಯ ಬದುಕುವ ಹಕ್ಕನ್ನು ಕಿತ್ತುಕೊಂಡಿರುವುದು ಮಾನವ ಹಕ್ಕು ಉಲ್ಲಂಘನೆಯಾಗಿದೆ. ಈ ಹಿನ್ನೆಲೆಯಲ್ಲಿ ಆಯೋಗದಿಂದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಗುಂಡು ಹಾರಿಸುವ ಅಗತ್ಯವಿತ್ತೆ ಎಂಬುದು ಸೇರಿ ಹಲವು ವಿಷಯಗಳ ಬಗ್ಗೆ ತನಿಖೆ ನಡೆಯಲಿದೆ. ಗುಂಡು ಹಾರಿಸಿದ ಪಿಎಸ್ಐ ಅನ್ನಪೂರ್ಣ ವಿಶ್ರಾಂತಿಯಲ್ಲಿದ್ದು, ಅವರನ್ನು ವಿಚಾರಣೆಗೆ ಒಳಪಡಿಸಬೇಕಿದೆ. ಡಿವೈಎಸ್ಪಿ ನೇತೃತ್ವದ ತಂಡ ತನಿಖೆ ನಡೆಸುತ್ತಿದ್ದು, ಎರಡು ತಿಂಗಳಲ್ಲಿ ಆಯೋಗಕ್ಕೆ ವರದಿ ನೀಡಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>