<p><strong>ಧಾರವಾಡ</strong>: ತಾಲ್ಲೂಕಿನ ಮುಗ್ಗಿಗಟ್ಟಿ ಗ್ರಾಮದಲ್ಲಿ ನಡೆದ ಧಾರವಾಡ ತಾಲ್ಲೂಕು 9ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬೊಮ್ಮಕ್ಕನವರ ಭಾನುವಾರ ಚಾಲನೆ ನೀಡಿದರು.</p>.<p>ಪುಷ್ಪಾಲಂಕಾರದಿಂದ ಕಂಗೊಳಿಸುತ್ತಿದ್ದ ರಥದಲ್ಲಿ ಸಮ್ಮೇಳನಾಧ್ಯಕ್ಷೆ ಲೀಲಾ ಕಲಕೋಟಿ ಅವರ ಮೆರವಣಿಗೆ ಗ್ರಾಮದ ವಿವಿಧ ಬೀದಿಗಳಲ್ಲಿ ಸಂಚರಿಸಿತು. ಅಲ್ಲಿ ನೆರೆದ ನೂರಾರು ಕನ್ನಡಾಭಿಮಾನಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾಹಿತಿಗಳು ಹಾಗೂ ಗ್ರಾಮಸ್ಥರು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು. ಮೆರವಣಿಗೆಯುದ್ದಕ್ಕೂ ಕನ್ನಡಾಂಬೆಗೆ ಜೈಕಾರ ಮೊಳಗಿಸಿದರು.</p>.<p>ಮೆರವಣಿಗೆಯಲ್ಲಿ ಕುಂಭಮೇಳ, ಕರಡಿ ಮಜಲು, ಡೊಳ್ಳು ಕುಣಿತ, ಶಾಲಾ ಮಕ್ಕಳ ಲೇಝಿಮ್ ತಂಡ ಸೇರಿದಂತೆ ಹಲವು ಕಲಾಮೇಳಗಳು ಸಮ್ಮೇಳನಕ್ಕೆ ಮೆರಗು ನೀಡಿದವು. ನೋಡಿದೆಲ್ಲಡೆ ಕನ್ನಡ ಧ್ವಜಗಳು ರಾರಾಜಿಸಿದವು. ಮಹಾತ್ಮರ ವೇಷಭೂಣ ಧರಿಸಿದ್ದ ಮಕ್ಕಳು ಗಮನ ಸೆಳೆದರು. ಒಟ್ಟಿನಲ್ಲಿ ಗ್ರಾಮದ ತುಂಬ ನಾಡು-ನುಡಿ ಝೇಂಕಾರ ಅನುರಣಿಸಿತು.</p>.<p>ಇದಕ್ಕೂ ಮೊದಲು ಮುಮ್ಮಿಗಟ್ಟಿ ಸರ್ಕಾರಿ ಶಾಲೆ ಆವರಣದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ವಿಠಲ ಭಟ್ಟಂಗಿ ರಾಷ್ಟ್ರಧ್ವಜ, ಕಸಪಾ ಜಿಲ್ಲಾಧ್ಯಕ್ಷ ಡಾ. ಲಿಂಗರಾಜ ಅಂಗಡಿ ನಾಡಧ್ವಜ, ಧಾರವಾಡ ತಾಲೂಕಾಧ್ಯಕ್ಷೆ ಡಾ.ಶರಣಮ್ಮ ಗೋರೆಬಾಳ ಪರಿಷತ್ ಧ್ವಜಾರೋಹಣ ನೆರವೇರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ತಾಲ್ಲೂಕಿನ ಮುಗ್ಗಿಗಟ್ಟಿ ಗ್ರಾಮದಲ್ಲಿ ನಡೆದ ಧಾರವಾಡ ತಾಲ್ಲೂಕು 9ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬೊಮ್ಮಕ್ಕನವರ ಭಾನುವಾರ ಚಾಲನೆ ನೀಡಿದರು.</p>.<p>ಪುಷ್ಪಾಲಂಕಾರದಿಂದ ಕಂಗೊಳಿಸುತ್ತಿದ್ದ ರಥದಲ್ಲಿ ಸಮ್ಮೇಳನಾಧ್ಯಕ್ಷೆ ಲೀಲಾ ಕಲಕೋಟಿ ಅವರ ಮೆರವಣಿಗೆ ಗ್ರಾಮದ ವಿವಿಧ ಬೀದಿಗಳಲ್ಲಿ ಸಂಚರಿಸಿತು. ಅಲ್ಲಿ ನೆರೆದ ನೂರಾರು ಕನ್ನಡಾಭಿಮಾನಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾಹಿತಿಗಳು ಹಾಗೂ ಗ್ರಾಮಸ್ಥರು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು. ಮೆರವಣಿಗೆಯುದ್ದಕ್ಕೂ ಕನ್ನಡಾಂಬೆಗೆ ಜೈಕಾರ ಮೊಳಗಿಸಿದರು.</p>.<p>ಮೆರವಣಿಗೆಯಲ್ಲಿ ಕುಂಭಮೇಳ, ಕರಡಿ ಮಜಲು, ಡೊಳ್ಳು ಕುಣಿತ, ಶಾಲಾ ಮಕ್ಕಳ ಲೇಝಿಮ್ ತಂಡ ಸೇರಿದಂತೆ ಹಲವು ಕಲಾಮೇಳಗಳು ಸಮ್ಮೇಳನಕ್ಕೆ ಮೆರಗು ನೀಡಿದವು. ನೋಡಿದೆಲ್ಲಡೆ ಕನ್ನಡ ಧ್ವಜಗಳು ರಾರಾಜಿಸಿದವು. ಮಹಾತ್ಮರ ವೇಷಭೂಣ ಧರಿಸಿದ್ದ ಮಕ್ಕಳು ಗಮನ ಸೆಳೆದರು. ಒಟ್ಟಿನಲ್ಲಿ ಗ್ರಾಮದ ತುಂಬ ನಾಡು-ನುಡಿ ಝೇಂಕಾರ ಅನುರಣಿಸಿತು.</p>.<p>ಇದಕ್ಕೂ ಮೊದಲು ಮುಮ್ಮಿಗಟ್ಟಿ ಸರ್ಕಾರಿ ಶಾಲೆ ಆವರಣದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ವಿಠಲ ಭಟ್ಟಂಗಿ ರಾಷ್ಟ್ರಧ್ವಜ, ಕಸಪಾ ಜಿಲ್ಲಾಧ್ಯಕ್ಷ ಡಾ. ಲಿಂಗರಾಜ ಅಂಗಡಿ ನಾಡಧ್ವಜ, ಧಾರವಾಡ ತಾಲೂಕಾಧ್ಯಕ್ಷೆ ಡಾ.ಶರಣಮ್ಮ ಗೋರೆಬಾಳ ಪರಿಷತ್ ಧ್ವಜಾರೋಹಣ ನೆರವೇರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>