ಕಲಘಟಗಿ: ಡೀಸೆಲ್ ತುಂಬಿದ್ದ ಲಾರಿ ಹಾಗೂ ಟಿಪ್ಪರ್ ನಡುವೆ ಶುಕ್ರವಾರ ರಾತ್ರಿ ಡಿಕ್ಕಿ ಸಂಭವಿಸಿದ ಪರಿಣಾಮ ಎರಡೂ ವಾಹನಗಳಿಗೆ ಬೆಂಕಿ ಹೊತ್ತಿ ಉರಿದ ಘಟನೆ ತಾಲ್ಲೂಕಿನದೇವಿಕೊಪ್ಪ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ.
ಟಿಪ್ಪರ್ ಚಾಲಕ ಯಲ್ಲಾಪುರ ತಾಲ್ಲೂಕಿನವರು ಎಂದು ತಿಳಿದುಬಂದಿದ್ದು, ವಾಹನದಲ್ಲೇ ಸಜೀವ ದಹನವಾಗಿದ್ದಾರೆ. ಲಾರಿಯಲ್ಲಿನ ಚಾಲಕ ಹಾಗೂ ಕ್ಲೀನರ್ಅಪಘಾತ ಸಂಭವಿಸುತ್ತಿದ್ದಂತೆ ಪರಾರಿಯಾಗಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.
ತಡರಾತ್ರಿಯ ತನಕ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ವಾಹನ ಎಲ್ಲಿಂದ ಎಲ್ಲಿಗೆ ಹೋಗುತ್ತಿತ್ತು ಎನ್ನುವ ಮಾಹಿತಿ ಲಭ್ಯವಾಗಿಲ್ಲ. ಸಿಪಿಐ ವಿಜಯ ಬಿರಾದರ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.