<p><strong>ಅಣ್ಣಿಗೇರಿ:</strong> ‘ಭೂಮಿಗೆ ಬಿದ್ದ ಬೀಜ, ಎದೆಗೆ ಬಿದ್ದ ಅಕ್ಷರ ಎಂದಿಗೂ ವ್ಯರ್ಥವಾಗುವದಿಲ್ಲ. ತಾವು ಕಲಿಸಿದ ವಿದ್ಯಾರ್ಥಿಗಳು ಉನ್ನತ ಮಟ್ಟದಲ್ಲಿ ಬೆಳೆಯುವದನ್ನು ಕಂಡು ಸಂತೋಷ ಪಡುವ ವ್ಯಕ್ತಿಯೇ ಗುರು’ ಎಂದು ಕೊಪ್ಪಳದ ಗವಿ ಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಶಲವಡಿ ಗ್ರಾಮದ ಶ್ರೀ ಗುರುಶಾಂತೇಶ್ವರ ಪ್ರೌಢಶಾಲೆಯಲ್ಲಿ ಭಾನುವಾರ ಹಳೆಯ ವಿದ್ಯಾರ್ಥಿಗಳ ಸಂಘದ 1995-96ನೇ ಸಾಲಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>ಹುಟ್ಟು ಮತ್ತು ಸಾವು ನಮ್ಮಿಚ್ಚೆಯಂತೆ ನಡೆಯುವದಿಲ್ಲ, ಆದರೆ ಬದುಕು ಮಾತ್ರ ನಮ್ಮ ಕೈಯಲ್ಲಿದೆ. ಹೀಗಾಗಿ ನಾವೆಲ್ಲರೂ ಉತ್ತಮ ಬದುಕನ್ನು ಸಾಗಿಸಲು ಪ್ರಯತ್ನಿಸಬೇಕು ಎಂದರು.</p>.<p>ಶಾಸಕ ಎನ್.ಎಚ್. ಕೋನರಡ್ಡಿ ಮಾತನಾಡಿ, ನಮಗೆ ಶಿಕ್ಷಣ ನೀಡಿದ ಶಿಕ್ಷಕರನ್ನು ಸದಾ ನೆನಪಿನಲ್ಲಿಟ್ಟುಕೊಂಡು ಅವರಿಗೆ ಗುರುವಂದನೆ ಮಾಡುತ್ತಿರುವ ಕಾರ್ಯ ಉತ್ತಮವಾದುದು ಎಂದರು.</p>.<p>ಈ ಕಾರ್ಯಕ್ರಮದಲ್ಲಿ ಶಲವಡಿಯ ವಿರಕ್ತಮಠದ ಗುರುಶಾಂತೇಶ್ವರ ಸ್ವಾಮೀಜಿ, ಮಾಜಿ ಸಚಿವ ಶಂಕರಪಾಟೀಲ ಮುನೇನಕೊಪ್ಪ ಹಾಗೂ ಶಿಕ್ಷಕರು ಮತ್ತು 1995-96 ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಸಂಘದ ಸರ್ವ ಸದಸ್ಯರು, ಗ್ರಾಮದ ಗುರು-ಹಿರಿಯರು ಯುವಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಣ್ಣಿಗೇರಿ:</strong> ‘ಭೂಮಿಗೆ ಬಿದ್ದ ಬೀಜ, ಎದೆಗೆ ಬಿದ್ದ ಅಕ್ಷರ ಎಂದಿಗೂ ವ್ಯರ್ಥವಾಗುವದಿಲ್ಲ. ತಾವು ಕಲಿಸಿದ ವಿದ್ಯಾರ್ಥಿಗಳು ಉನ್ನತ ಮಟ್ಟದಲ್ಲಿ ಬೆಳೆಯುವದನ್ನು ಕಂಡು ಸಂತೋಷ ಪಡುವ ವ್ಯಕ್ತಿಯೇ ಗುರು’ ಎಂದು ಕೊಪ್ಪಳದ ಗವಿ ಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಶಲವಡಿ ಗ್ರಾಮದ ಶ್ರೀ ಗುರುಶಾಂತೇಶ್ವರ ಪ್ರೌಢಶಾಲೆಯಲ್ಲಿ ಭಾನುವಾರ ಹಳೆಯ ವಿದ್ಯಾರ್ಥಿಗಳ ಸಂಘದ 1995-96ನೇ ಸಾಲಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>ಹುಟ್ಟು ಮತ್ತು ಸಾವು ನಮ್ಮಿಚ್ಚೆಯಂತೆ ನಡೆಯುವದಿಲ್ಲ, ಆದರೆ ಬದುಕು ಮಾತ್ರ ನಮ್ಮ ಕೈಯಲ್ಲಿದೆ. ಹೀಗಾಗಿ ನಾವೆಲ್ಲರೂ ಉತ್ತಮ ಬದುಕನ್ನು ಸಾಗಿಸಲು ಪ್ರಯತ್ನಿಸಬೇಕು ಎಂದರು.</p>.<p>ಶಾಸಕ ಎನ್.ಎಚ್. ಕೋನರಡ್ಡಿ ಮಾತನಾಡಿ, ನಮಗೆ ಶಿಕ್ಷಣ ನೀಡಿದ ಶಿಕ್ಷಕರನ್ನು ಸದಾ ನೆನಪಿನಲ್ಲಿಟ್ಟುಕೊಂಡು ಅವರಿಗೆ ಗುರುವಂದನೆ ಮಾಡುತ್ತಿರುವ ಕಾರ್ಯ ಉತ್ತಮವಾದುದು ಎಂದರು.</p>.<p>ಈ ಕಾರ್ಯಕ್ರಮದಲ್ಲಿ ಶಲವಡಿಯ ವಿರಕ್ತಮಠದ ಗುರುಶಾಂತೇಶ್ವರ ಸ್ವಾಮೀಜಿ, ಮಾಜಿ ಸಚಿವ ಶಂಕರಪಾಟೀಲ ಮುನೇನಕೊಪ್ಪ ಹಾಗೂ ಶಿಕ್ಷಕರು ಮತ್ತು 1995-96 ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಸಂಘದ ಸರ್ವ ಸದಸ್ಯರು, ಗ್ರಾಮದ ಗುರು-ಹಿರಿಯರು ಯುವಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>