<p><strong>ಹುಬ್ಬಳ್ಳಿ</strong>: ಪ್ರತಿ ವ್ಯಕ್ತಿಯ ಸಾಧನೆಯ ಹಿಂದೆ ಶಿಕ್ಷಕರ ಅವಿರತ ಶ್ರಮವಿದ್ದು, ಅವರು ಸುಂದರ ಹಾಗೂ ಸುಶಿಕ್ಷಿತ ಸಮಾಜದ ನಿರ್ಮಾತೃಗಳು ಎಂದು ಶಾಸಕ ಪ್ರಸಾದ ಅಬ್ಬಯ್ಯ ಬಣ್ಣಿಸಿದರು.</p>.<p>ಇಲ್ಲಿನ ಬಿಡ್ನಾಳದ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನದ ಕಾರ್ಯಕ್ರಮದಲ್ಲಿ 2020-21ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದಿರುವ ಮಂಜುನಾಥ ಎಚ್. ಜಂಗಳಿ ಅವರಿಗೆ ಸನ್ಮಾನಿಸಿದರು.</p>.<p>‘ಶಿಕ್ಷಕರಿಲ್ಲದ ಶಿಕ್ಷಣವನ್ನು ಕಲ್ಪಿಸಿಕೊಳ್ಳುವುದು ಅಸಾಧ್ಯ. ಮನೆಯಲ್ಲಿ ಮಕ್ಕಳ ಲಾಲನೆ-ಪಾಲನೆಯಲ್ಲಿ ತಾಯಿಯ ಪಾತ್ರ ಎಷ್ಟು ಮುಖ್ಯವೋ ಅದೇ ರೀತಿ ಮಕ್ಕಳ ಬೌದ್ಧಿಕ ಜ್ಞಾನ ಅಷ್ಟೇ ಮುಖ್ಯ. ಶಾಲೆಯ ಎಲ್ಲಾ ಮಕ್ಕಳನ್ನು ತಮ್ಮ ಸ್ವಂತ ಮಕ್ಕಳಂತೆ ಸಮಾನ ರೀತಿಯಲ್ಲಿ ಭಾವಿಸಿ, ಶಿಕ್ಷಣ ನೀಡುವವರೇ ಆದರ್ಶ ಶಿಕ್ಷಕರಾಗಲು ಸಾಧ್ಯ’ ಎಂದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಕರಿಕಟ್ಟಿ, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಎಸ್. ಶಿವಳ್ಳಿಮಠ, ಪಾಲಿಕೆ ಮಾಜಿ ಸದಸ್ಯರಾದ ಮೋಹನ ಅಸುಂಡಿ, ಲಕ್ಷ್ಮೀಬಾಯಿ ಯಮನೂರು ಜಾಧವ, ವಿಜುನಗೌಡ ಪಾಟೀಲ, ಶಾಲೆಯ ಮುಖ್ಯ ಶಿಕ್ಷಕ ಆರ್.ಬಿ. ಮಡಿವಾಳರ, ಎಸ್.ಡಿ.ಎಂ.ಸಿ. ಅಧ್ಯಕ್ಷ ಶೌಕತ್ ಅಲಿ ತುಗ್ಗಾನಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಪ್ರತಿ ವ್ಯಕ್ತಿಯ ಸಾಧನೆಯ ಹಿಂದೆ ಶಿಕ್ಷಕರ ಅವಿರತ ಶ್ರಮವಿದ್ದು, ಅವರು ಸುಂದರ ಹಾಗೂ ಸುಶಿಕ್ಷಿತ ಸಮಾಜದ ನಿರ್ಮಾತೃಗಳು ಎಂದು ಶಾಸಕ ಪ್ರಸಾದ ಅಬ್ಬಯ್ಯ ಬಣ್ಣಿಸಿದರು.</p>.<p>ಇಲ್ಲಿನ ಬಿಡ್ನಾಳದ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನದ ಕಾರ್ಯಕ್ರಮದಲ್ಲಿ 2020-21ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದಿರುವ ಮಂಜುನಾಥ ಎಚ್. ಜಂಗಳಿ ಅವರಿಗೆ ಸನ್ಮಾನಿಸಿದರು.</p>.<p>‘ಶಿಕ್ಷಕರಿಲ್ಲದ ಶಿಕ್ಷಣವನ್ನು ಕಲ್ಪಿಸಿಕೊಳ್ಳುವುದು ಅಸಾಧ್ಯ. ಮನೆಯಲ್ಲಿ ಮಕ್ಕಳ ಲಾಲನೆ-ಪಾಲನೆಯಲ್ಲಿ ತಾಯಿಯ ಪಾತ್ರ ಎಷ್ಟು ಮುಖ್ಯವೋ ಅದೇ ರೀತಿ ಮಕ್ಕಳ ಬೌದ್ಧಿಕ ಜ್ಞಾನ ಅಷ್ಟೇ ಮುಖ್ಯ. ಶಾಲೆಯ ಎಲ್ಲಾ ಮಕ್ಕಳನ್ನು ತಮ್ಮ ಸ್ವಂತ ಮಕ್ಕಳಂತೆ ಸಮಾನ ರೀತಿಯಲ್ಲಿ ಭಾವಿಸಿ, ಶಿಕ್ಷಣ ನೀಡುವವರೇ ಆದರ್ಶ ಶಿಕ್ಷಕರಾಗಲು ಸಾಧ್ಯ’ ಎಂದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಕರಿಕಟ್ಟಿ, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಎಸ್. ಶಿವಳ್ಳಿಮಠ, ಪಾಲಿಕೆ ಮಾಜಿ ಸದಸ್ಯರಾದ ಮೋಹನ ಅಸುಂಡಿ, ಲಕ್ಷ್ಮೀಬಾಯಿ ಯಮನೂರು ಜಾಧವ, ವಿಜುನಗೌಡ ಪಾಟೀಲ, ಶಾಲೆಯ ಮುಖ್ಯ ಶಿಕ್ಷಕ ಆರ್.ಬಿ. ಮಡಿವಾಳರ, ಎಸ್.ಡಿ.ಎಂ.ಸಿ. ಅಧ್ಯಕ್ಷ ಶೌಕತ್ ಅಲಿ ತುಗ್ಗಾನಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>