<p><strong>ಧಾರವಾಡ</strong>: ‘ಟೆಲಿ ಮನಸ್ ಕಾರ್ಯಕ್ರಮದ ಉದ್ದೇಶ, ಪ್ರಾಮುಖ್ಯವನ್ನು ಆಪ್ತ ಸಮಾಲೋಚಕರು ತಿಳಿದುಕೊಂಡು, ಉತ್ತಮವಾಗಿ ಕಾರ್ಯನಿರ್ವಹಿಸಬೇಕು’ ಎಂದು ಬೆಂಗಳೂರಿನ ಆರೋಗ್ಯಸೌಧದ ಮಾನಸಿಕ ಆರೋಗ್ಯ ವಿಭಾಗದ ಉಪನಿರ್ದೇಶಕಿ ಡಾ. ರಜನಿ ಪಿ. ಹೇಳಿದರು.</p>.<p>ಧಾರವಾಡದ ಡಿಮ್ಹಾನ್ಸ್ನಲ್ಲಿ ಈಚೆಗೆ ನಡೆದ ಟೆಲಿ ಮನಸ್ ವಿಭಾಗದ ಆಪ್ತ ಸಮಾಲೋಚಕರ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿ, ‘14416 ಮತ್ತು 1800-89-14416 ಟೆಲಿ ಮನಸ್ ಸಹಾಯವಾಣಿ ಸಂಖ್ಯೆಗಳಾಗಿವೆ’ ಎಂದರು. </p>.<p>ಡಾ. ಎನ್. ಮಂಜುನಾಥ ಮಾತನಾಡಿ, ‘ಆಪ್ತಸಮಾಲೋಚನೆಯ ಕೌಶಲಗಳನ್ನು ಚೆನ್ನಾಗಿ ತಿಳಿದುಕೊಳ್ಳಬೇಕು. ಮಾನಸಿಕ ಆರೋಗ್ಯ ಸೇವೆಗಳನ್ನು ಸಮರ್ಥವಾಗಿ ನಿರ್ವಹಿಸಬೇಕು’ ಎಂದು ತಿಳಿಸಿದರು.</p>.<p>ಟೆಲಿ-ಮನಸ್ ವಿಭಾಗದ ನೋಡೆಲ್ ಅಧಿಕಾರಿ ಡಾ. ರಂಗನಾಥ ಕುಲಕರ್ಣಿ ಮಾತನಾಡಿ, ‘ಟೆಲಿ-ಮನಸ್ ವಿಭಾಗದಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಮಾನಸಿಕ ಆರೋಗ್ಯ ಜಾಗೃತಿಗೆ ಒತ್ತು ನೀಡಲಾಗಿದೆ’ ಎಂದರು.</p>.<p>ಡಿಮ್ಹಾನ್ಸ್ ನಿರ್ದೇಶಕ ಡಾ. ಅರಣಕುಮಾರ ಸಿ. ಅಧ್ಯಕ್ಷತೆ ವಹಿಸಿದ್ದರು. ಡಾ. ನವೀನಕುಮಾರ ಸಿ., ಮುಖ್ಯಆಡಳಿತಾಧಿಕಾರಿ ಸಿದ್ದಲಿಂಗಯ್ಯ ಹಿರೇಮಠ, ಸೂಪರಿಂಟೆಂಡೆಂಟ್ ಡಾ. ರಾಘವೇಂದ್ರ ನಾಯಕ, ಡಾ. ರಾಘವೇಂದ್ರ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ‘ಟೆಲಿ ಮನಸ್ ಕಾರ್ಯಕ್ರಮದ ಉದ್ದೇಶ, ಪ್ರಾಮುಖ್ಯವನ್ನು ಆಪ್ತ ಸಮಾಲೋಚಕರು ತಿಳಿದುಕೊಂಡು, ಉತ್ತಮವಾಗಿ ಕಾರ್ಯನಿರ್ವಹಿಸಬೇಕು’ ಎಂದು ಬೆಂಗಳೂರಿನ ಆರೋಗ್ಯಸೌಧದ ಮಾನಸಿಕ ಆರೋಗ್ಯ ವಿಭಾಗದ ಉಪನಿರ್ದೇಶಕಿ ಡಾ. ರಜನಿ ಪಿ. ಹೇಳಿದರು.</p>.<p>ಧಾರವಾಡದ ಡಿಮ್ಹಾನ್ಸ್ನಲ್ಲಿ ಈಚೆಗೆ ನಡೆದ ಟೆಲಿ ಮನಸ್ ವಿಭಾಗದ ಆಪ್ತ ಸಮಾಲೋಚಕರ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿ, ‘14416 ಮತ್ತು 1800-89-14416 ಟೆಲಿ ಮನಸ್ ಸಹಾಯವಾಣಿ ಸಂಖ್ಯೆಗಳಾಗಿವೆ’ ಎಂದರು. </p>.<p>ಡಾ. ಎನ್. ಮಂಜುನಾಥ ಮಾತನಾಡಿ, ‘ಆಪ್ತಸಮಾಲೋಚನೆಯ ಕೌಶಲಗಳನ್ನು ಚೆನ್ನಾಗಿ ತಿಳಿದುಕೊಳ್ಳಬೇಕು. ಮಾನಸಿಕ ಆರೋಗ್ಯ ಸೇವೆಗಳನ್ನು ಸಮರ್ಥವಾಗಿ ನಿರ್ವಹಿಸಬೇಕು’ ಎಂದು ತಿಳಿಸಿದರು.</p>.<p>ಟೆಲಿ-ಮನಸ್ ವಿಭಾಗದ ನೋಡೆಲ್ ಅಧಿಕಾರಿ ಡಾ. ರಂಗನಾಥ ಕುಲಕರ್ಣಿ ಮಾತನಾಡಿ, ‘ಟೆಲಿ-ಮನಸ್ ವಿಭಾಗದಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಮಾನಸಿಕ ಆರೋಗ್ಯ ಜಾಗೃತಿಗೆ ಒತ್ತು ನೀಡಲಾಗಿದೆ’ ಎಂದರು.</p>.<p>ಡಿಮ್ಹಾನ್ಸ್ ನಿರ್ದೇಶಕ ಡಾ. ಅರಣಕುಮಾರ ಸಿ. ಅಧ್ಯಕ್ಷತೆ ವಹಿಸಿದ್ದರು. ಡಾ. ನವೀನಕುಮಾರ ಸಿ., ಮುಖ್ಯಆಡಳಿತಾಧಿಕಾರಿ ಸಿದ್ದಲಿಂಗಯ್ಯ ಹಿರೇಮಠ, ಸೂಪರಿಂಟೆಂಡೆಂಟ್ ಡಾ. ರಾಘವೇಂದ್ರ ನಾಯಕ, ಡಾ. ರಾಘವೇಂದ್ರ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>