ಹುಬ್ಬಳ್ಳಿ: ಮೂರು ಮತ್ತು ಐದನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೂ ಮುಂದಿನ ಸೆಮಿಸ್ಟರ್ಗೆ ಬಡ್ತಿ ನೀಡಬೇಕು ಎಂದು ಆಗ್ರಹಿಸಿ, ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಎನ್ಎಸ್ಯುಐ ನೇತೃತ್ವದಲ್ಲಿ ಬುಧವಾರ ನಡೆಸಿದ ಇಲ್ಲಿ ಪ್ರತಿಭಟನೆ ಸಂದರ್ಭದಲ್ಲಿ ವಿದ್ಯಾರ್ಥಿಯೊಬ್ಬ ಕುಲಪತಿ ಮೇಲೆ ಮಸಿ ಎರಚಿದ್ದಾನೆ.
ಘಟನೆಗೆ ಸಂಬಂಧಿಸಿದಂತೆ ಎಪಿಎಂಸಿ ನವನಗರ ಠಾಣೆ ಪೊಲೀಸರು ಎಂಟು ಜನ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
ಘಟನೆ ಕುರಿತು ಪ್ರಜಾವಾಣಿಗೆ ಪ್ರತಿಕ್ರಿಯಿಸಿದ ಈಶ್ವರ ಭಟ್ ‘ಬೇಡಿಕೆ ತಿಳಿಸುವ ನೆಪದಲ್ಲಿ ವಿದ್ಯಾರ್ಥಿಗಳು ಸಂಚು ರೂಪಿಸಿಯೇ ತಾವಿರುವ ಜಾಗಕ್ಕೆ ನನ್ನನ್ನು ಕರೆಯಿಸಿಕೊಂಡರು. ಬೇಡಿಕೆಗಳನ್ನು ಆಲಿಸಿ ವಾಪಸ್ ಹೋಗುವಾಗ ಇಂಕ್ ಎರಚಿದರು. ಇದು ಉದ್ದೇಶಪೂರ್ವಕವಾಗಿ ಮಾಡಿದ ಕೃತ್ಯ’ ಎಂದು ಆರೋಪಿಸಿದರು.