<p><strong>ಹುಬ್ಬಳ್ಳಿ: </strong>115 ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಸಾಹಿತ್ಯ ಪರಿಷತ್ (ಕ.ಸಾ.ಪ) ರಾಜ್ಯ ಘಟಕಕ್ಕೆ ಕಲ್ಯಾಣ ಕರ್ನಾಟಕ ಭಾಗದ ಯಾರೊಬ್ಬರೂ ಅಧ್ಯಕ್ಷರಾಗಿಲ್ಲ. ಈ ಬಾರಿ ನಾನು ಅಧ್ಯಕ್ಷನಾಗಿ ಆಯ್ಕೆಯಾದರೆ ಐದು ವರ್ಷಗಳಿಗೆ ವಿಸ್ತರಣೆಗೊಂಡಿರುವ ಅಧ್ಯಕ್ಷರ ಅಧಿಕಾರವಧಿಯನ್ನು ಮೂರು ವರ್ಷಕ್ಕೆ ಕಡಿತ ಮಾಡಲಾಗುವುದು ಎಂದುಕಲಬುರ್ಗಿಯ ಪ್ರೊ. ಶಿವರಾಜ ಪಾಟೀಲ ಹೇಳಿದರು.</p>.<p>ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಮಹೇಶ ಜೋಶಿ ಸೇರಿದಂತೆ ಹಲವರು ಈ ಬಾರಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಾಗಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ಕೆಲಸ ಮಾಡದವರೂ ಅಧ್ಯಕ್ಷರಾಗಲು ಕಾಯುತ್ತಿದ್ದಾರೆ.ಸಾಹಿತ್ಯ ಪರಿಷತ್ ನಿವೃತ್ತ ಐಎಎಸ್ ಅಧಿಕಾರಿಗಳ ತಂಗುದಾಣ ಅಥವಾ ಗಂಜಿಕೇಂದ್ರವಲ್ಲ’ ಎಂದರು.</p>.<p>’ಇದುವರೆಗೆ ಯಾವ ಮಹಿಳೆಯೂ ರಾಜ್ಯ ಘಟಕದ ಅಧ್ಯಕ್ಷರಾಗಿಲ್ಲ. ರಾಜ್ಯದ ಉದ್ದಗಲಕ್ಕೂ ಓಡಾಡಿ ಕೆಲಸ ಮಾಡುವುದು ಅವರಿಗೆ ಕಷ್ಟ. ಆದ್ದರಿಂದ ನಾನು ಅಧ್ಯಕ್ಷನಾದರೆ ಮಹಿಳಾ ಸಾಹಿತಿಗೆ ಅಧ್ಯಕ್ಷ ಸ್ಥಾನಕ್ಕೆ ಸರಿಸಮನಾದ ಹುದ್ದೆ ನೀಡುತ್ತೇನೆ’ ಎಂದರು.</p>.<p>ಮಹಿಳೆ ಎಲ್ಲ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದ್ದಾಳೆ, ಅವಕಾಶ ನೀಡದೆ ಮಹಿಳೆ ಅಧ್ಯಕ್ಷೆಯಾಗುವುದು ಹೇಗೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ‘ರಾಜ್ಯದ ಯಾವುದೇ ಭಾಗದಿಂದ ಮಹಿಳೆ ಸ್ಪರ್ಧಿಸಿದರೆ ನಾನು ಕಣದಿಂದ ಹಿಂದೆ ಸರಿಯುತ್ತೇನೆ’ ಎಂದರು.</p>.<p>’ಕೋವಿಡ್ ಸಮಯವಿದ್ದರೂ ಕ.ಸಾ.ಪ. ಅಧ್ಯಕ್ಷ ಮನು ಬಳಿಗಾರ ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನ ಆಯೋಜಿಸಲು ತರಾತುರಿಯಲ್ಲಿ ನಿರ್ಧಾರ ಕೈಗೊಂಡಿದ್ದಾರೆ. ಇತ್ತೀಚೆಗಿನ ಸಮ್ಮೇಳನಗಳು ಜಾತ್ರೆಯಂತಾಗಿದ್ದು, ರಾಜಕಾರಣಿಗಳೇ ತುಂಬಿಕೊಳ್ಳುತ್ತಿದ್ದಾರೆ. ಆದ್ದರಿಂದ ಸಾಹಿತ್ಯ ಪರಿಷತ್ನ ಅಮೃತ ನಿಧಿ ಯೋಜನೆಯಡಿ ಪ್ರತಿ ಕನ್ನಡಿಗನಿಂದ ₹10 ಮತ್ತು ಪ್ರತಿ ಸರ್ಕಾರಿ ನೌಕರನಿಂದ ₹100 ಸಂಗ್ರಹಿಸಿ ಸರ್ಕಾರದ ನಯಾಪೈಸೆ ಅನುದಾನ ಪಡೆಯದೆ ಸಮ್ಮೇಳನ ಆಯೋಜಿಸುವ ಯೋಜನೆಯಿದೆ’ ಎಂದರು.</p>.<p>’ಈಗಿನವರಲ್ಲಿ ಬಹಳಷ್ಟು ಜನ ಬಿಜೆಪಿ, ಕಾಂಗ್ರೆಸ್ ಸಾಹಿತಿಗಳಾಗಿದ್ದಾರೆ. ಅಧ್ಯಕ್ಷರಾಗಲು ₹1 ಕೋಟಿ ಖರ್ಚು ಮಾಡುತ್ತಾರೆ. ಇಂಥ ಪರಿಸ್ಥಿತಿಯಲ್ಲಿಯೂ ವ್ಯಕ್ತಿಯ ಸಾಧನೆ ಹಾಗೂ ಗೌರವ ಆಧಾರವಾಗಿಟ್ಟುಕೊಂಡು ನನಗೆ ಮತ ನೀಡುತ್ತಾರೆ ಎನ್ನುವ ಭರವಸೆಯಿದೆ. ಅಧ್ಯಕ್ಷನಾದರೆ ಧಾರವಾಡದಲ್ಲಿ ಮಹಿಳಾ ಮತ್ತು ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನದ ಆಯೋಜಿಸಲಾಗುವುದು’ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>115 ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಸಾಹಿತ್ಯ ಪರಿಷತ್ (ಕ.ಸಾ.ಪ) ರಾಜ್ಯ ಘಟಕಕ್ಕೆ ಕಲ್ಯಾಣ ಕರ್ನಾಟಕ ಭಾಗದ ಯಾರೊಬ್ಬರೂ ಅಧ್ಯಕ್ಷರಾಗಿಲ್ಲ. ಈ ಬಾರಿ ನಾನು ಅಧ್ಯಕ್ಷನಾಗಿ ಆಯ್ಕೆಯಾದರೆ ಐದು ವರ್ಷಗಳಿಗೆ ವಿಸ್ತರಣೆಗೊಂಡಿರುವ ಅಧ್ಯಕ್ಷರ ಅಧಿಕಾರವಧಿಯನ್ನು ಮೂರು ವರ್ಷಕ್ಕೆ ಕಡಿತ ಮಾಡಲಾಗುವುದು ಎಂದುಕಲಬುರ್ಗಿಯ ಪ್ರೊ. ಶಿವರಾಜ ಪಾಟೀಲ ಹೇಳಿದರು.</p>.<p>ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಮಹೇಶ ಜೋಶಿ ಸೇರಿದಂತೆ ಹಲವರು ಈ ಬಾರಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಾಗಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ಕೆಲಸ ಮಾಡದವರೂ ಅಧ್ಯಕ್ಷರಾಗಲು ಕಾಯುತ್ತಿದ್ದಾರೆ.ಸಾಹಿತ್ಯ ಪರಿಷತ್ ನಿವೃತ್ತ ಐಎಎಸ್ ಅಧಿಕಾರಿಗಳ ತಂಗುದಾಣ ಅಥವಾ ಗಂಜಿಕೇಂದ್ರವಲ್ಲ’ ಎಂದರು.</p>.<p>’ಇದುವರೆಗೆ ಯಾವ ಮಹಿಳೆಯೂ ರಾಜ್ಯ ಘಟಕದ ಅಧ್ಯಕ್ಷರಾಗಿಲ್ಲ. ರಾಜ್ಯದ ಉದ್ದಗಲಕ್ಕೂ ಓಡಾಡಿ ಕೆಲಸ ಮಾಡುವುದು ಅವರಿಗೆ ಕಷ್ಟ. ಆದ್ದರಿಂದ ನಾನು ಅಧ್ಯಕ್ಷನಾದರೆ ಮಹಿಳಾ ಸಾಹಿತಿಗೆ ಅಧ್ಯಕ್ಷ ಸ್ಥಾನಕ್ಕೆ ಸರಿಸಮನಾದ ಹುದ್ದೆ ನೀಡುತ್ತೇನೆ’ ಎಂದರು.</p>.<p>ಮಹಿಳೆ ಎಲ್ಲ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದ್ದಾಳೆ, ಅವಕಾಶ ನೀಡದೆ ಮಹಿಳೆ ಅಧ್ಯಕ್ಷೆಯಾಗುವುದು ಹೇಗೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ‘ರಾಜ್ಯದ ಯಾವುದೇ ಭಾಗದಿಂದ ಮಹಿಳೆ ಸ್ಪರ್ಧಿಸಿದರೆ ನಾನು ಕಣದಿಂದ ಹಿಂದೆ ಸರಿಯುತ್ತೇನೆ’ ಎಂದರು.</p>.<p>’ಕೋವಿಡ್ ಸಮಯವಿದ್ದರೂ ಕ.ಸಾ.ಪ. ಅಧ್ಯಕ್ಷ ಮನು ಬಳಿಗಾರ ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನ ಆಯೋಜಿಸಲು ತರಾತುರಿಯಲ್ಲಿ ನಿರ್ಧಾರ ಕೈಗೊಂಡಿದ್ದಾರೆ. ಇತ್ತೀಚೆಗಿನ ಸಮ್ಮೇಳನಗಳು ಜಾತ್ರೆಯಂತಾಗಿದ್ದು, ರಾಜಕಾರಣಿಗಳೇ ತುಂಬಿಕೊಳ್ಳುತ್ತಿದ್ದಾರೆ. ಆದ್ದರಿಂದ ಸಾಹಿತ್ಯ ಪರಿಷತ್ನ ಅಮೃತ ನಿಧಿ ಯೋಜನೆಯಡಿ ಪ್ರತಿ ಕನ್ನಡಿಗನಿಂದ ₹10 ಮತ್ತು ಪ್ರತಿ ಸರ್ಕಾರಿ ನೌಕರನಿಂದ ₹100 ಸಂಗ್ರಹಿಸಿ ಸರ್ಕಾರದ ನಯಾಪೈಸೆ ಅನುದಾನ ಪಡೆಯದೆ ಸಮ್ಮೇಳನ ಆಯೋಜಿಸುವ ಯೋಜನೆಯಿದೆ’ ಎಂದರು.</p>.<p>’ಈಗಿನವರಲ್ಲಿ ಬಹಳಷ್ಟು ಜನ ಬಿಜೆಪಿ, ಕಾಂಗ್ರೆಸ್ ಸಾಹಿತಿಗಳಾಗಿದ್ದಾರೆ. ಅಧ್ಯಕ್ಷರಾಗಲು ₹1 ಕೋಟಿ ಖರ್ಚು ಮಾಡುತ್ತಾರೆ. ಇಂಥ ಪರಿಸ್ಥಿತಿಯಲ್ಲಿಯೂ ವ್ಯಕ್ತಿಯ ಸಾಧನೆ ಹಾಗೂ ಗೌರವ ಆಧಾರವಾಗಿಟ್ಟುಕೊಂಡು ನನಗೆ ಮತ ನೀಡುತ್ತಾರೆ ಎನ್ನುವ ಭರವಸೆಯಿದೆ. ಅಧ್ಯಕ್ಷನಾದರೆ ಧಾರವಾಡದಲ್ಲಿ ಮಹಿಳಾ ಮತ್ತು ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನದ ಆಯೋಜಿಸಲಾಗುವುದು’ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>