ಇಲ್ಲಿನ ರೈಲ್ವೆ ಸೇತುವೆ ಕೆಳಗೆ ನೀರು ನಿಂತಿದ್ದು, ವಾಹನಗಳ ಸಂಚಾರ ಬಂದ್ ಆಗಿದೆ. ಹಳಿಯಾಳ–ಬೆಳಗಾವಿ ಮಾರ್ಗದ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಇಲ್ಲಿನ ದೇಸಾಯಿ ಚಾಳ, ಕಾಳೆ ಪ್ಲಾಟ್ ಹಾಗೂ ಟಿಳಕ ನಗರದ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಅಗತ್ಯ ವಸ್ತುಗಳ ಸಮೇತ ಸ್ಥಳಾಂತರಿಸಲಾಗಿದೆ. ತಾತ್ಕಾಲಿಕವಾಗಿ ಉಮಾ ಭವನ ಕಲ್ಯಾಣ ಮಂಟಪದಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದೆ. 40 ಜನ ಕೇಂದ್ರದಲ್ಲಿ ವಾಸವಾಗಿದ್ದಾರೆ.