ಹುಬ್ಬಳ್ಳಿ: ಹುಬ್ಬಳ್ಳಿಯ ರೂಪಂ ಮತ್ತು ಧಾರವಾಡದ ಶ್ರೀನಿವಾಸ ಚಿತ್ರಮಂದಿರದಲ್ಲಿ ಸಾರ್ವಜನಿಕರಿಗೆ ಮಾ.16ರಿಂದ ಮಾ.20ರ ವರೆಗೆ `ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಉಚಿತ ವೀಕ್ಷಣೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವ್ಯವಸ್ಥೆ ಮಾಡಿದ್ದಾರೆ.
ಬುಧವಾರದಿಂದ ಮಧ್ಯಾಹ್ನ 3 ಹಾಗೂ ಸಂಜೆ 6ರ ಪ್ರದರ್ಶನಗಳಲ್ಲಿ ಸಿನಿಮಾ ವೀಕ್ಷಣೆ ಮಾಡಬಹುದಾಗಿದೆಮೂರುಸಾವಿರ ಮಠದ ಗುರುಸಿದ್ಧ ರಾಜೇಂದ್ರ ಸ್ವಾಮೀಜಿ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ.
‘ಯುವಕರು ಕಾಶ್ಮೀರಿ ಪಂಡಿತರ ಇತಿಹಾಸ ಮರೆಯಬಾರದು. ಇಂತಹ ಇತಿಹಾಸ ಮತ್ತೊಮ್ಮೆ ಬರಬಾರದು. ಚಿತ್ರದ ಉದ್ದೇಶ ಸತ್ಯವನ್ನು ಜನರಿಗೆ ತಲುಪಿಸುವುದಾಗಿದೆ. ಕಾಶ್ಮೀರದಲ್ಲಿ ಪಂಡಿತರ ಮಾರಣಹೋಮದ ಕುರಿತ 'ದಿ ಕಾಶ್ಮೀರಿ ಫೈಲ್ಸ್' ಬೆಳಕು ಚೆಲ್ಲಿದೆ ಸಚಿವ ಪ್ರಲ್ಹಾದ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.