<p><strong>ಹುಬ್ಬಳ್ಳಿ: </strong>ನಗರದ ಪ್ರಮುಖ ವಾಯುವಿಹಾರ ತಾಣವಾದ ನೃಪತುಂಗ ಬೆಟ್ಟದಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಅರಣ್ಯ ಇಲಾಖೆ ಸಿಬ್ಬಂದಿ ಸಾರ್ವಜನಿಕರಿಗೆ ಬೆಟ್ಟದ ಪ್ರವೇಶ ತಾತ್ಕಾಲಿಕವಾಗಿ ನಿಷೇಧಿಸಿದ್ದಾರೆ.</p>.<p>ಬೆಟ್ಟ ಹಾಗೂ ಅದರ ಸುತ್ತಲಿನ ಪ್ರದೇಶದಲ್ಲಿ ಬುಧವಾರ ರಾತ್ರಿ ಚಿರತೆ ಓಡಾಡಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದರು. ಇದರಿಂದ ಜನ ಆತಂಕಕ್ಕೆ ಒಳಗಾಗಿದ್ದಾರೆ.</p>.<p>ವಲಯ ಅರಣ್ಯ ಅಧಿಕಾರಿ ಎಸ್.ಎಂ ತೆಗ್ಗಿನಮನಿ ಈ ಕುರಿತು ಪ್ರತಿಕ್ರಿಯಿಸಿ ಚಿರತೆ ಕಾಣಿಸಿಕೊಂಡಿದೆ ಎಂದು ಜನರಿಂದ ಗೊತ್ತಾಗಿದೆ. ಜನವಸತಿ ಪ್ರದೇಶವನ್ನು ದಾಟಿ ನೃಪತುಂಗ ಬೆಟ್ಟಕ್ಕೆ ಬಂದಿದೆ ಎನ್ನುವುದೇ ಅಚ್ಚರಿ. ಈ ಕುರಿತು ಜನಜಾಗೃತಿ ಮೂಡಿಸಲಾಗಿದೆ ಎಂದರು.</p>.<p>ಚಿರತೆ ಹೆಜ್ಜೆಗುರುತು ಪತ್ತೆ ಹಚ್ಚಲು ನಮ್ಮ ಇಲಾಖೆ ಸಿಬ್ಬಂದಿ ಕಾರ್ಯ ಪ್ರವೃತ್ತರಾಗಿದ್ದಾರೆ. ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುವುದು ಎಂದರು.</p>.<p>ಕಳೆದ ವಾರ ಹುಬ್ಬಳ್ಳಿ ಹೊರವಲಯದ ಅಂಚಟಗೇರಿಯಲ್ಲಿ ಚಿರತೆ ಕಂಡಿತ್ತು. ಅದು ಈಗ ಇಲ್ಲಿಗೆ ಬಂದಿರಲೂಬಹುದು ಎಂದು ಅವರು ಅನುಮಾನ ವ್ಯಕ್ತಪಡಿಸಿದರು.</p>.<p><strong>ಇದನ್ನೂ ಓದಿ... <a href="https://www.prajavani.net/district/uthara-kannada/leopard-captured-at-kumta-uttara-kannada-district-867075.html" target="_blank">ಕುಮಟಾ: ನಾಯಿ ಬೇಟೆಗೆ ಬಂದ ಚಿರತೆ ನಾಯಿ ಪಂಜರದಲ್ಲೇ ಬಂಧಿ!</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ನಗರದ ಪ್ರಮುಖ ವಾಯುವಿಹಾರ ತಾಣವಾದ ನೃಪತುಂಗ ಬೆಟ್ಟದಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಅರಣ್ಯ ಇಲಾಖೆ ಸಿಬ್ಬಂದಿ ಸಾರ್ವಜನಿಕರಿಗೆ ಬೆಟ್ಟದ ಪ್ರವೇಶ ತಾತ್ಕಾಲಿಕವಾಗಿ ನಿಷೇಧಿಸಿದ್ದಾರೆ.</p>.<p>ಬೆಟ್ಟ ಹಾಗೂ ಅದರ ಸುತ್ತಲಿನ ಪ್ರದೇಶದಲ್ಲಿ ಬುಧವಾರ ರಾತ್ರಿ ಚಿರತೆ ಓಡಾಡಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದರು. ಇದರಿಂದ ಜನ ಆತಂಕಕ್ಕೆ ಒಳಗಾಗಿದ್ದಾರೆ.</p>.<p>ವಲಯ ಅರಣ್ಯ ಅಧಿಕಾರಿ ಎಸ್.ಎಂ ತೆಗ್ಗಿನಮನಿ ಈ ಕುರಿತು ಪ್ರತಿಕ್ರಿಯಿಸಿ ಚಿರತೆ ಕಾಣಿಸಿಕೊಂಡಿದೆ ಎಂದು ಜನರಿಂದ ಗೊತ್ತಾಗಿದೆ. ಜನವಸತಿ ಪ್ರದೇಶವನ್ನು ದಾಟಿ ನೃಪತುಂಗ ಬೆಟ್ಟಕ್ಕೆ ಬಂದಿದೆ ಎನ್ನುವುದೇ ಅಚ್ಚರಿ. ಈ ಕುರಿತು ಜನಜಾಗೃತಿ ಮೂಡಿಸಲಾಗಿದೆ ಎಂದರು.</p>.<p>ಚಿರತೆ ಹೆಜ್ಜೆಗುರುತು ಪತ್ತೆ ಹಚ್ಚಲು ನಮ್ಮ ಇಲಾಖೆ ಸಿಬ್ಬಂದಿ ಕಾರ್ಯ ಪ್ರವೃತ್ತರಾಗಿದ್ದಾರೆ. ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುವುದು ಎಂದರು.</p>.<p>ಕಳೆದ ವಾರ ಹುಬ್ಬಳ್ಳಿ ಹೊರವಲಯದ ಅಂಚಟಗೇರಿಯಲ್ಲಿ ಚಿರತೆ ಕಂಡಿತ್ತು. ಅದು ಈಗ ಇಲ್ಲಿಗೆ ಬಂದಿರಲೂಬಹುದು ಎಂದು ಅವರು ಅನುಮಾನ ವ್ಯಕ್ತಪಡಿಸಿದರು.</p>.<p><strong>ಇದನ್ನೂ ಓದಿ... <a href="https://www.prajavani.net/district/uthara-kannada/leopard-captured-at-kumta-uttara-kannada-district-867075.html" target="_blank">ಕುಮಟಾ: ನಾಯಿ ಬೇಟೆಗೆ ಬಂದ ಚಿರತೆ ನಾಯಿ ಪಂಜರದಲ್ಲೇ ಬಂಧಿ!</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>