ದೆಹಲಿಯಿಂದ ವಿಶೇಷ ವಿಮಾನದ ಮೂಲಕ ನಗರದ ವಿಮಾನ ನಿಲ್ದಾಣಕ್ಕೆ 3.45ಕ್ಕೆ ತಲುಪಲಿರುವ ಪ್ರಧಾನಿ ಮೋದಿ, ಸಂಜೆ 4ಕ್ಕೆ ರೈಲ್ವೆ ಮೈದಾನಕ್ಕೆ ಆಗಮಿಸಲಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಗೋಕುಲ ರಸ್ತೆ, ಹೊಸೂರು ವೃತ್ತ, ದೇಶಪಾಂಡೆ ನಗರ, ಶಿರೂರು ಪಾರ್ಕ್, ಹಳೇ ಕೋರ್ಟ್ ವೃತ್ತ, ದೇಸಾಯಿ ವೃತ್ತ ಮಾರ್ಗದಲ್ಲಿ ಬ್ಯಾರಿಕೇಡ್ ಹಾಕಿ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.