ಉಪಮುಖ್ಯಮಂತ್ರಿ ಸಿ.ಎಸ್. ಅಶ್ವತ್ಥ ನಾರಾಯಣ ಅವರಿಗೆ ಪತ್ರ ಬರೆದಿರುವ ಅವರು ‘ರಂಗನಾಥ್ ದಕ್ಷತೆ, ಪ್ರಾಮಾಣಿಕತೆ ಮತ್ತು ಸರಳತೆಯಿಂದ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ. ಅವರು ರಾಜ್ಯ ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಹುದ್ದೆಯಲ್ಲಿರುವಾಗಲೇ ಕೆಫೆ ಕಾಫಿ ಡೇಗೆ ನೇಮಕಗೊಂಡರು. ಈ ಕಂಪನಿ ಆರ್ಥಿಕ ಅಪರಾಧವೆಸಗಿದ ಆರೋಪ ಎದುರಿಸುತ್ತಿದೆ. ಆದಾಯ ತೆರಿಗೆ ಮತ್ತು ಜಾರಿ ನಿರ್ದೇಶನಾಲಯದಿಂದ ವಿಚಾರಣೆ ನಡೆಯುತ್ತಿದೆ. ಇಂಥ ಕಂಪನಿಗೆ ಉಪಾಧ್ಯಕ್ಷರಾಗುವ ಮೊದಲು ಸೂಕ್ಷ್ಮತೆ ಅರಿತುಕೊಳ್ಳಬೇಕಿತ್ತು’ ಎಂದಿದ್ದಾರೆ.