ಮೌನೇಶ ಟಾಟಾ ಮಾರ್ಕೊಪೋಲೊ ಕಂಪನಿ ಉದ್ಯೋಗಿಯಾಗಿದ್ದರು. ಕಂಪನಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ ಉದ್ಯೋಗ ಕಳೆದುಕೊಳ್ಳುವ ಆತಂಕದಲ್ಲಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಮೂಲತಃ ಗದಗ ಜಿಲ್ಲೆ ರೋಣ ತಾಲ್ಲೂಕಿನ ಅಸೂಟಿ ಗ್ರಾಮದವರಾಗಿದ್ದು, ಧಾರವಾಡದಲ್ಲಿ ಉದ್ಯೋಗಕ್ಕಾಗಿ ಬಂದು ನೆಲೆಸಿದ್ದರು. ಪತ್ನಿ ಅರ್ಪಿತಾ (28), ಮಗಳು ಸುಕೃತಾ (4)ಗೆ ವಿಷ ನೀಡಿ ತಾನು ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.