ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ | ಒಂದೇ ಕುಟುಂಬದ ಮೂವರು ಆತ್ಮಹತ್ಯೆ

Last Updated 25 ಜುಲೈ 2020, 4:18 IST
ಅಕ್ಷರ ಗಾತ್ರ

ಧಾರವಾಡ: ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಪ್ರಕರಣ ನಗರದ ಕವಳಿಕಾಯಿ‌ ಚಾಳದಲ್ಲಿ ಶನಿವಾರ ನಡೆದಿದೆ.

ಮೌನೇಶ ಪತ್ತಾರ (36) ಆತ್ಮಹತ್ಯೆಗೆ ಶರಣಾಗಿದ್ದು, ಪತ್ನಿ, ಮಗಳಿಗೆ ವಿಷ ನೀಡಿ, ತಾವೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೌನೇಶ ಟಾಟಾ ಮಾರ್ಕೊಪೋಲೊ ಕಂಪನಿ ಉದ್ಯೋಗಿಯಾಗಿದ್ದರು. ಕಂಪನಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ ಉದ್ಯೋಗ ಕಳೆದುಕೊಳ್ಳುವ ಆತಂಕದಲ್ಲಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಮೂಲತಃ ಗದಗ ಜಿಲ್ಲೆ ರೋಣ ತಾಲ್ಲೂಕಿನ ಅಸೂಟಿ ಗ್ರಾಮದವರಾಗಿದ್ದು, ಧಾರವಾಡದಲ್ಲಿ ಉದ್ಯೋಗಕ್ಕಾಗಿ ಬಂದು‌ ನೆಲೆಸಿದ್ದರು.
ಪತ್ನಿ ಅರ್ಪಿತಾ (28), ಮಗಳು ಸುಕೃತಾ (4)ಗೆ ವಿಷ ನೀಡಿ ತಾನು ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT