<p>ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯ ವೈದ್ಯರ ವಸತಿ ಸಂಕೀರ್ಣದ ಮನೆಯೊಂದರ ಬೀಗ ಮುರಿದು ಒಳ ನುಗ್ಗಿರುವ ಕಳ್ಳರು, ಚಿನ್ನಾಭರಣ ಸೇರಿದಂತೆ ₹3.32 ಲಕ್ಷ ಮೌಲ್ಯದ ವಸ್ತುಗಳನ್ನು ಕದ್ದೊಯ್ದಿದ್ದಾರೆ.</p>.<p>ಡಾ. ನಿಖಿಲ್ ಅವರ ಮನೆಯಲ್ಲಿ ಕಳವು ನಡೆದಿದೆ. ನಿಖಿಲ್ ಹಾಗೂ ಅವರ ಪತ್ನಿ ಇಬ್ಬರೂ ವೈದ್ಯರಾಗಿದ್ದು, ಬೆಳಿಗ್ಗೆ 10ಕ್ಕೆ ಕರ್ತವ್ಯಕ್ಕೆ ತೆರಳಿದ್ದರು. ಆಗ ಮನೆಗೆ ನುಗ್ಗಿರುವ ಕಳ್ಳರು ಚಿನ್ನಾಭರಣ, ಲ್ಯಾಪ್ಟಾಪ್, 3 ಐ–ಪಾಡ್, ವಾಚ್ ಸೇರಿದಂತೆ ಕೈಗೆ ಸಿಕ್ಕ ವಸ್ತುಗಳನ್ನೆಲ್ಲ ಕದ್ದುಕೊಂಡು ಹೋಗಿದ್ದಾರೆ ಎಂದು ವಿದ್ಯಾನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.</p>.<p class="Subhead">ಐವರ ಬಂಧನ: ಬಸವ ನಗರದ ಎರಡು ಮನೆಗಳಲ್ಲಿ ಇತ್ತೀಚೆಗೆ ನಡೆದಿದ್ದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಎ.ಜಿ. ಚವ್ಹಾಣ ನೇತೃತ್ವದ ತಂಡ ಗುರುವಾರ ಐವರನ್ನು ಬಂಧಿಸಿದೆ.</p>.<p>ಆರೋಪಿಗಳು ಡಿ.12ರಂದು ಎರಡೂ ಮನೆಗಳಲ್ಲಿ ಯಾರೂ ಇಲ್ಲದಿದ್ದಾಗ, ಬಾಗಿಲ ಬೀಗ ಮುರಿದು ₹3.30 ಲಕ್ಷ ಮೌಲ್ಯದ 52 ಗ್ರಾಂ ಚಿನ್ನಾಭರಣ, 390 ಗ್ರಾಂ ಬೆಳ್ಳಿ ಆಭರಣ ಹಾಗೂ ಇತರ ವಸ್ತುಗಳನ್ನು ಕಳವು ಮಾಡಿದ್ದರು. ಕದ್ದ ವಸ್ತುಗಳನ್ನು ವಶಪಡಿಸಿಕೊಂಡು ಎಲ್ಲರನ್ನೂ ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯ ವೈದ್ಯರ ವಸತಿ ಸಂಕೀರ್ಣದ ಮನೆಯೊಂದರ ಬೀಗ ಮುರಿದು ಒಳ ನುಗ್ಗಿರುವ ಕಳ್ಳರು, ಚಿನ್ನಾಭರಣ ಸೇರಿದಂತೆ ₹3.32 ಲಕ್ಷ ಮೌಲ್ಯದ ವಸ್ತುಗಳನ್ನು ಕದ್ದೊಯ್ದಿದ್ದಾರೆ.</p>.<p>ಡಾ. ನಿಖಿಲ್ ಅವರ ಮನೆಯಲ್ಲಿ ಕಳವು ನಡೆದಿದೆ. ನಿಖಿಲ್ ಹಾಗೂ ಅವರ ಪತ್ನಿ ಇಬ್ಬರೂ ವೈದ್ಯರಾಗಿದ್ದು, ಬೆಳಿಗ್ಗೆ 10ಕ್ಕೆ ಕರ್ತವ್ಯಕ್ಕೆ ತೆರಳಿದ್ದರು. ಆಗ ಮನೆಗೆ ನುಗ್ಗಿರುವ ಕಳ್ಳರು ಚಿನ್ನಾಭರಣ, ಲ್ಯಾಪ್ಟಾಪ್, 3 ಐ–ಪಾಡ್, ವಾಚ್ ಸೇರಿದಂತೆ ಕೈಗೆ ಸಿಕ್ಕ ವಸ್ತುಗಳನ್ನೆಲ್ಲ ಕದ್ದುಕೊಂಡು ಹೋಗಿದ್ದಾರೆ ಎಂದು ವಿದ್ಯಾನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.</p>.<p class="Subhead">ಐವರ ಬಂಧನ: ಬಸವ ನಗರದ ಎರಡು ಮನೆಗಳಲ್ಲಿ ಇತ್ತೀಚೆಗೆ ನಡೆದಿದ್ದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಎ.ಜಿ. ಚವ್ಹಾಣ ನೇತೃತ್ವದ ತಂಡ ಗುರುವಾರ ಐವರನ್ನು ಬಂಧಿಸಿದೆ.</p>.<p>ಆರೋಪಿಗಳು ಡಿ.12ರಂದು ಎರಡೂ ಮನೆಗಳಲ್ಲಿ ಯಾರೂ ಇಲ್ಲದಿದ್ದಾಗ, ಬಾಗಿಲ ಬೀಗ ಮುರಿದು ₹3.30 ಲಕ್ಷ ಮೌಲ್ಯದ 52 ಗ್ರಾಂ ಚಿನ್ನಾಭರಣ, 390 ಗ್ರಾಂ ಬೆಳ್ಳಿ ಆಭರಣ ಹಾಗೂ ಇತರ ವಸ್ತುಗಳನ್ನು ಕಳವು ಮಾಡಿದ್ದರು. ಕದ್ದ ವಸ್ತುಗಳನ್ನು ವಶಪಡಿಸಿಕೊಂಡು ಎಲ್ಲರನ್ನೂ ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>