<p><strong>ಹುಬ್ಬಳ್ಳಿ:</strong> ‘ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗಲಿದ್ದು, ಜಲಪ್ರಳಯ ಆಗುವ ಲಕ್ಷಣಗಳಿವೆ. ಪ್ರಕೃತಿ ಮುನಿದಿದ್ದು ಸರಿಯಾಗಲಿದೆ’ ಎಂದು ಕೋಡಿಮಠ ಮಹಾಸಂಸ್ಥಾನದ ಪೀಠಾಧ್ಯಕ್ಷ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು.</p><p>ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜಾಗತಿಕ ಮಟ್ಟದಲ್ಲಿ ಜಲಪ್ರಳಯ ಸಂಭವಿಸಿ ಒಂದೆರಡು ರಾಷ್ಟ್ರಗಳು ಮುಳುಗುವ ಸಾಧ್ಯತೆ ಇದೆ. ಬೇರೆ ಎಲ್ಲೋ ಕಡೆ ಬಾಂಬ್ ಸ್ಫೋಟದಂತಹ ಘಟನೆಗಳು ಸಂಭವಿಸಿ ವಿಷಾನಿಲದಿಂದ ಭಾರತದಲ್ಲಿ ಜನರು ಅಕಾಲಿಕವಾಗಿ ಸಾವನ್ನಪ್ಪುವ ಸಂಭವ ಇದೆ’ ಎಂದರು.</p><p>‘ವಿಜಯದಶಮಿಯಿಂದ ಸಂಕ್ರಾಂತಿಯೊಳಗೆ ಜಗತ್ತಿನ ಸಾಮ್ರಾಟರು ತಲ್ಲಣಗೊಳ್ಳುವಂತ ದುರ್ಘಟನೆ ರಾಷ್ಟ್ರಮಟ್ಟದಲ್ಲಿ ನಡೆಯಲಿದೆ. ಆಳುವವರು ಅರಿತರೆ ಇದರಿಂದ ಪಾರಾಗಬಹುದು. ಕರುನಾಡಿಗೂ ಕೆಲವು ಆಪತ್ತುಗಳು ಇದ್ದು, ಸಾವು ನೋವುಗಳು ಸಂಭವಿಸಲಿವೆ. ದೈವಕೃಪೆಯಿಂದ ಇವೆಲ್ಲವೂ ಪಾರಾಗುತ್ತವೆ’ ಎಂದು ಹೇಳಿದರು.</p><p>‘ರಾಜ್ಯದಲ್ಲಿ ಸ್ಥಿರ ಸರ್ಕಾರ ಬರಲಿದೆ ಎಂದು ಹೇಳಿದ್ದೆ. ಅದು ನಿಜವಾಗಿದೆ. ಒಬ್ಬ ವ್ಯಕ್ತಿಯೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆಯೇ ಎಂಬ ಬಗ್ಗೆ ಪ್ರತಿಕ್ರಿಯಿಸಿವುದಿಲ್ಲ‘ ಎಂದರು.</p><p>ಈ ಸರ್ಕಾರ ಸ್ಥಿರವಾಗಿ ಇರುತ್ತದೆಯೇ ಎಂಬುದಕ್ಕೆ, ‘ಬಾಯಿಯ ವಾಸನೆ ಮೂಗಿಗೆ ಬಡಿಯುವುದಿಲ್ಲ. ಊರಿನಲ್ಲಿನ ಎಲ್ಲ ವಾಸನೆಯನ್ನು ಮೂಗು ಗ್ರಹಿಸುತ್ತದೆ’ ಎಂದು ವಿಶ್ಲೇಷಿಸಿದರು.</p><p>‘ಬಡವರು, ನಿರ್ಗತಿಕರಿಗೆ ಗ್ಯಾರಂಟಿ ಯೋಜನೆಗಳಿಂದ ಅನುಕೂಲವಾಗಲಿದೆ. ಶಕ್ತಿ ಯೋಜನೆಯಿಂದ ಮಹಿಳೆಯರು ಸ್ವತಂತ್ರವಾಗಿ ಪ್ರಯಾಣಿಸಲು ಸಾಧ್ಯವಾಗಿದೆ’ ಎಂದರು.</p><p>ಮುಂಬರುವ ಲೋಕಸಭೆ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿ, ‘ಸತ್ಯ ಅಪ್ರಿಯವಾಗಿರುತ್ತದೆ. ಸುಳ್ಳು ಪ್ರಿಯವಾಗಿರುತ್ತದೆ. ನಾನು ಸತ್ಯ ಹೇಳಿದರೆ ಮಠಕ್ಕೆ ಹೋಗುವುದಿಲ್ಲ. ಸಂದರ್ಭ ಬಂದಾಗ ಈ ಬಗ್ಗೆ ಹೇಳುತ್ತೇನೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗಲಿದ್ದು, ಜಲಪ್ರಳಯ ಆಗುವ ಲಕ್ಷಣಗಳಿವೆ. ಪ್ರಕೃತಿ ಮುನಿದಿದ್ದು ಸರಿಯಾಗಲಿದೆ’ ಎಂದು ಕೋಡಿಮಠ ಮಹಾಸಂಸ್ಥಾನದ ಪೀಠಾಧ್ಯಕ್ಷ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು.</p><p>ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜಾಗತಿಕ ಮಟ್ಟದಲ್ಲಿ ಜಲಪ್ರಳಯ ಸಂಭವಿಸಿ ಒಂದೆರಡು ರಾಷ್ಟ್ರಗಳು ಮುಳುಗುವ ಸಾಧ್ಯತೆ ಇದೆ. ಬೇರೆ ಎಲ್ಲೋ ಕಡೆ ಬಾಂಬ್ ಸ್ಫೋಟದಂತಹ ಘಟನೆಗಳು ಸಂಭವಿಸಿ ವಿಷಾನಿಲದಿಂದ ಭಾರತದಲ್ಲಿ ಜನರು ಅಕಾಲಿಕವಾಗಿ ಸಾವನ್ನಪ್ಪುವ ಸಂಭವ ಇದೆ’ ಎಂದರು.</p><p>‘ವಿಜಯದಶಮಿಯಿಂದ ಸಂಕ್ರಾಂತಿಯೊಳಗೆ ಜಗತ್ತಿನ ಸಾಮ್ರಾಟರು ತಲ್ಲಣಗೊಳ್ಳುವಂತ ದುರ್ಘಟನೆ ರಾಷ್ಟ್ರಮಟ್ಟದಲ್ಲಿ ನಡೆಯಲಿದೆ. ಆಳುವವರು ಅರಿತರೆ ಇದರಿಂದ ಪಾರಾಗಬಹುದು. ಕರುನಾಡಿಗೂ ಕೆಲವು ಆಪತ್ತುಗಳು ಇದ್ದು, ಸಾವು ನೋವುಗಳು ಸಂಭವಿಸಲಿವೆ. ದೈವಕೃಪೆಯಿಂದ ಇವೆಲ್ಲವೂ ಪಾರಾಗುತ್ತವೆ’ ಎಂದು ಹೇಳಿದರು.</p><p>‘ರಾಜ್ಯದಲ್ಲಿ ಸ್ಥಿರ ಸರ್ಕಾರ ಬರಲಿದೆ ಎಂದು ಹೇಳಿದ್ದೆ. ಅದು ನಿಜವಾಗಿದೆ. ಒಬ್ಬ ವ್ಯಕ್ತಿಯೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆಯೇ ಎಂಬ ಬಗ್ಗೆ ಪ್ರತಿಕ್ರಿಯಿಸಿವುದಿಲ್ಲ‘ ಎಂದರು.</p><p>ಈ ಸರ್ಕಾರ ಸ್ಥಿರವಾಗಿ ಇರುತ್ತದೆಯೇ ಎಂಬುದಕ್ಕೆ, ‘ಬಾಯಿಯ ವಾಸನೆ ಮೂಗಿಗೆ ಬಡಿಯುವುದಿಲ್ಲ. ಊರಿನಲ್ಲಿನ ಎಲ್ಲ ವಾಸನೆಯನ್ನು ಮೂಗು ಗ್ರಹಿಸುತ್ತದೆ’ ಎಂದು ವಿಶ್ಲೇಷಿಸಿದರು.</p><p>‘ಬಡವರು, ನಿರ್ಗತಿಕರಿಗೆ ಗ್ಯಾರಂಟಿ ಯೋಜನೆಗಳಿಂದ ಅನುಕೂಲವಾಗಲಿದೆ. ಶಕ್ತಿ ಯೋಜನೆಯಿಂದ ಮಹಿಳೆಯರು ಸ್ವತಂತ್ರವಾಗಿ ಪ್ರಯಾಣಿಸಲು ಸಾಧ್ಯವಾಗಿದೆ’ ಎಂದರು.</p><p>ಮುಂಬರುವ ಲೋಕಸಭೆ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿ, ‘ಸತ್ಯ ಅಪ್ರಿಯವಾಗಿರುತ್ತದೆ. ಸುಳ್ಳು ಪ್ರಿಯವಾಗಿರುತ್ತದೆ. ನಾನು ಸತ್ಯ ಹೇಳಿದರೆ ಮಠಕ್ಕೆ ಹೋಗುವುದಿಲ್ಲ. ಸಂದರ್ಭ ಬಂದಾಗ ಈ ಬಗ್ಗೆ ಹೇಳುತ್ತೇನೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>