ಅಭ್ಯರ್ಥಿ ಡಾ. ಪಾಂಡುರಂಗ ಪಾಟೀಲ ಮಾತನಾಡಿ, ‘ಜಗದೀಶ ಶೆಟ್ಟರ್ ಮತ್ತು ಪ್ರಲ್ಹಾದ ಜೋಶಿ ಅವರು ಅವಳಿನಗರದಲ್ಲಿ ಅಭಿವೃದ್ಧಿ ಪರ್ವ ಆರಂಭಿಸಿದ್ದಾರೆ. 24x7 ನೀರು, ಹೊಸ ರಸ್ತೆಗಳು ಸೇರಿದಂತೆ ಹಲವು ಕಾಮಗಾರಿಗಳಿಂದಾಗಿ ನಗರದ ಚಹರೆ ಬದಲಾಗಿದೆ. ವಾರ್ಡ್ನಲ್ಲೂ ಹಲವು ಕೆಲಸಗಳಾಗಿವೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಅದೇ ರೀತಿ, ಪಾಲಿಕೆಯಲ್ಲೂ ಪಕ್ಷವನ್ನು ಅಧಿಕಾರಕ್ಕೆ ತರಬೇಕಿದೆ. ಹಾಗಾಗಿ, ಮತ ವಿಭಜನೆಗೆ ಅವಕಾಶ ನೀಡದೆ ಎಲ್ಲರೂ ಬಿಜೆಪಿ ಅಭ್ಯರ್ಥಿಗೆ ಮತ ನೀಡಬೇಕು’ ಎಂದು ಮನವಿ ಮಾಡಿದರು.