<p><strong>ಹುಬ್ಬಳ್ಳಿ:</strong> ‘ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳಿಗೆ ಪರ್ಯಾಯವಾಗಿ ರಾಜ್ಯದಲ್ಲಿ ತೃತೀಯ ರಂಗ ರಚಿಸಲಿದ್ದು, ಫೆ.8ರಂದು ಕಲಬುರಗಿ ವಿಭಾಗಮಟ್ಟದ ಸಮಾವೇಶದಲ್ಲಿ ಹೆಸರು ಘೋಷಿಸಲಾಗುವುದು’ ಎಂದು ಆಲ್ ಇಂಡಿಯಾ ಬಹುಜನ ಸಮಾಜ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಹೇಳಿದರು.</p>.<p>‘ರಾಜ್ಯದಲ್ಲಿ ಭ್ರಷ್ಟಾಚಾರ, ದೌರ್ಜನ್ಯ ಹೆಚ್ಚುತ್ತಿದೆ. ರಾಜಕೀಯ ಪಕ್ಷಗಳಿಂದ ಸುಧಾರಣೆ ಸಾಧ್ಯವಾಗಿಲ್ಲ. ಹೀಗಾಗಿ, ಬದಲಾವಣೆ ಅವಶ್ಯ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಲಾಗುವುದು. ಮುಂದೆ ವಿಧಾನಸಭೆ ಚುನಾವಣೆಯಲ್ಲಿ ಕನಿಷ್ಠ 50 ಸ್ಥಾನ ಗೆಲ್ಲುವ ಗುರಿ ಇದೆ’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಕಲಬುರಗಿ ಸಮಾವೇಶದಲ್ಲಿ ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ, ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮತ್ತು ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಳ್ಳುವರು. ತೆಲಂಗಾಣದ ಬಿಆರ್ಎಸ್ ಪಕ್ಷದ ಮುಖಂಡರನ್ನು ಆಹ್ವಾನಿಸಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳಿಗೆ ಪರ್ಯಾಯವಾಗಿ ರಾಜ್ಯದಲ್ಲಿ ತೃತೀಯ ರಂಗ ರಚಿಸಲಿದ್ದು, ಫೆ.8ರಂದು ಕಲಬುರಗಿ ವಿಭಾಗಮಟ್ಟದ ಸಮಾವೇಶದಲ್ಲಿ ಹೆಸರು ಘೋಷಿಸಲಾಗುವುದು’ ಎಂದು ಆಲ್ ಇಂಡಿಯಾ ಬಹುಜನ ಸಮಾಜ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಹೇಳಿದರು.</p>.<p>‘ರಾಜ್ಯದಲ್ಲಿ ಭ್ರಷ್ಟಾಚಾರ, ದೌರ್ಜನ್ಯ ಹೆಚ್ಚುತ್ತಿದೆ. ರಾಜಕೀಯ ಪಕ್ಷಗಳಿಂದ ಸುಧಾರಣೆ ಸಾಧ್ಯವಾಗಿಲ್ಲ. ಹೀಗಾಗಿ, ಬದಲಾವಣೆ ಅವಶ್ಯ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಲಾಗುವುದು. ಮುಂದೆ ವಿಧಾನಸಭೆ ಚುನಾವಣೆಯಲ್ಲಿ ಕನಿಷ್ಠ 50 ಸ್ಥಾನ ಗೆಲ್ಲುವ ಗುರಿ ಇದೆ’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಕಲಬುರಗಿ ಸಮಾವೇಶದಲ್ಲಿ ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ, ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮತ್ತು ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಳ್ಳುವರು. ತೆಲಂಗಾಣದ ಬಿಆರ್ಎಸ್ ಪಕ್ಷದ ಮುಖಂಡರನ್ನು ಆಹ್ವಾನಿಸಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>