ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶಾಸಕರನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ. ಅವರೆಲ್ಲ ಬಂಧನದಲ್ಲಿರುವಂತೆ ಕಾಣುತ್ತಿದೆ. ಕಾನೂನಿನ ರಕ್ಷಣೆಯಲ್ಲಿ ಅವರೊಂದಿಗೆ ಚರ್ಚಿಸಲು, ಮಾತನಾಡಲು ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಲಾಗುವುದು. ಪ್ರಜಾಪ್ರಭುತ್ವ ಉಳಿಸಿಕೊಳ್ಳಲು ಇದು ಅನಿವಾರ್ಯ’ ಎಂದರು.