ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕರು ಅಧಿವೇಶನಕ್ಕೆ ಹಾಜರಾಗದಿದ್ದರೆ ‘ಹೇಬಿಯಸ್‌ ಕಾರ್ಪಸ್‌ಗೆ ಚಿಂತನೆ’

Last Updated 12 ಜುಲೈ 2019, 20:01 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ರಾಜೀನಾಮೆ ಸಲ್ಲಿಸಿರುವ ಶಾಸಕರು ಅಧಿವೇಶನಕ್ಕೆ ಹಾಜರಾಗದಿದ್ದರೆ, ಹೈಕೋರ್ಟ್‌ಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಲು ಪಕ್ಷ ಗಂಭೀರ ಚಿಂತನೆ ನಡೆಸಿದೆ’ ಎಂದು ಕಾಂಗ್ರೆಸ್ ಮುಖಂಡ ಬಸವರಾಜ ರಾಯರಡ್ಡಿ ಹೇಳಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶಾಸಕರನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ. ಅವರೆಲ್ಲ ಬಂಧನದಲ್ಲಿರುವಂತೆ ಕಾಣುತ್ತಿದೆ. ಕಾನೂನಿನ ರಕ್ಷಣೆಯಲ್ಲಿ ಅವರೊಂದಿಗೆ ಚರ್ಚಿಸಲು, ಮಾತನಾಡಲು ಹೇಬಿಯಸ್‌ ಕಾರ್ಪಸ್‌ ಅರ್ಜಿ ಸಲ್ಲಿಸಲಾಗುವುದು. ಪ್ರಜಾಪ್ರಭುತ್ವ ಉಳಿಸಿಕೊಳ್ಳಲು ಇದು ಅನಿವಾರ್ಯ’ ಎಂದರು.

‘ಬಿಜೆಪಿ ಅವಿಶ್ವಾಸ ಮತ ಮಂಡನೆಗೆ ಒತ್ತಾಯಿಸುವುದಿಲ್ಲ. ಬದಲಿಗೆ ಸರ್ಕಾರವನ್ನು ಬೀಳಿಸಿ, ರಾಷ್ಟ್ರಪತಿ ಆಡಳಿತ ಹೇರಿ, ಮಧ್ಯಂತರ ಚುನಾವಣೆ ನಡೆಸಲು ಮುಂದಾಗಲಿದೆ’ ಎಂದು ಅವರು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT