ಪ್ರಕರಣವೇನು: ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಗ್ರಾಮವೊಂದರ ನಿವಾಸಿ ಮುತ್ತಪ್ಪ, ಲಾರಿಯೊಂದರ ಕ್ಲೀನರ್ ಆಗಿದ್ದು, ಮೇ 20ರಂದು ಬೆಳಗಿನ ಜಾವ 2 ಗಂಟೆಯಲ್ಲಿ, ಹುಬ್ಬಳ್ಳಿಯಿಂದ ಹಾವೇರಿ ಕಡೆಗೆ ಹೋಗುವ, ರಾಷ್ಟ್ರೀಯ ಹೆದ್ದಾರಿ 48ರಲ್ಲಿರುವ, ಅಂಬುಜಾ ಫ್ಯಾಕ್ಟರಿ ಹತ್ತಿರ, ಲಾರಿಯನ್ನು ನಿಲ್ಲಿಸಿ ಶೌಚಕ್ಕೆ ಹೋಗಿದ್ದರು. ಆ ಸಮಯದಲ್ಲಿ ಬೈಕ್ನಲ್ಲಿ ಬಂದ ಮೂವರು ಅಪರಿಚಿತರು, ಚಾಕು ತೋರಿಸಿ ಬೆದರಿಸಿ ಮೊಬೈಲ್ನ್ನು ಕಿತ್ತುಕೊಂಡು ಹೋಗಿದ್ದರು.