ಮೈತ್ರಿ ಪಕ್ಷದ ಅಭ್ಯರ್ಥಿ ವಿನಯ ಕುಲಕರ್ಣಿ ಅವರು ಈ ಮೂವರನ್ನು ಕಾಂಗ್ರೆಸ್ ಪಕ್ಷದ ಶಾಲು ಹೊದಿಸಿ ಪಕ್ಷಕ್ಕೆ ಬರ ಮಾಡಿಕೊಂಡರು. ಈ ವೇಳೆ ಮಾತನಾಡಿದ ಅವರು, ‘ಬಿಜೆಪಿಯಲ್ಲಿನ ಕುತಂತ್ರ ರಾಜಕಾರಣದಿಂದ ಅಲ್ಲಿನ ಕಾರ್ಯಕರ್ತರಿಗೆ ಮುಖಂಡರಿಗೆ ಆ ಪಕ್ಷದಲ್ಲಿ ಇರಲು ಆಗುತ್ತಿಲ್ಲ. ಆಂತರಿಕ ಪ್ರಜಾಪ್ರಭುತ್ವವೇ ಸತ್ತು ಹೋಗಿದೆ. ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಅಲ್ಲಿ ಕಿಡಿ ಹೊತ್ತಿದ್ದು, ಇನ್ನೂ ಸಾಕಷ್ಟು ಮುಖಂಡರು ಕಾಂಗ್ರೆಸ್ ಕಡೆ ಬರಲಿದ್ದಾರೆ’ ಎಂದರು.