<p><strong>ಹುಬ್ಬಳ್ಳಿ</strong>: ಕೊರೊನಾ ಸೋಂಕು ಹರಡುವ ಕಾರಣದಿಂದ ರದ್ದು ಮಾಡಲಾಗಿದ್ದ ರೈಲು ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಬುಕ್ಕಿಂಗ್ ಸೌಲಭ್ಯವನ್ನು ಶುಕ್ರವಾರದಿಂದ (ಮೇ 22) ಪುನರಾರಂಭಿಸಲಾಗುವುದು ಎಂದು ನೈರುತ್ಯ ರೈಲ್ವೆ ತಿಳಿಸಿದೆ.</p>.<p>ಕಾಯ್ದಿರಿಸಿದ ಟಿಕೆಟ್ಗಳನ್ನು ಪಡೆದುಕೊಳ್ಳಲು ಕೌಂಟರ್ಗಳನ್ನು ಹಂತಹಂತವಾಗಿ ತೆರೆಯಲು ಇಲಾಖೆ ಮುಂದಾಗಿದ್ದು, ಮೊದಲ ಹಂತದಲ್ಲಿ ಹುಬ್ಬಳ್ಳಿ ವಿಭಾಗದಲ್ಲಿ ಹುಬ್ಬಳ್ಳಿ, ಬೆಳಗಾವಿ, ಬಳ್ಳಾರಿ, ವಿಜಯಪುರ, ಧಾರವಾಡ, ಹೊಸಪೇಟೆ ಮತ್ತು ವಾಸ್ಕೋಡಗಾಮದ ನಿಲ್ದಾಣಗಳಲ್ಲಿ ಕೌಂಟರ್ಗಳು ಆರಂಭವಾಗಲಿವೆ.</p>.<p>ಇಲಾಖೆಯಿಂದ ಪರವಾನಗಿ ಪಡೆದ ಏಜೆಂಟರು ಮತ್ತು ಸೇವಾ ಕೇಂದ್ರಗಳಲ್ಲಿಯೂ ಟಿಕೆಟ್ ನೀಡಬಹುದು. ಟಿಕೆಟ್ಗಳನ್ನು ಪಡೆಯುವ ವೇಳೆ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು, ಅಂತರ ಕಾಯ್ದುಕೊಳ್ಳಬೇಕು ಎಂದು ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.</p>.<p>ಮುಂದಿನ ಎರಡ್ಮೂರು ದಿನಗಳಲ್ಲಿ 200ಕ್ಕೂ ಹೆಚ್ಚು ರೈಲುಗಳ ಸಂಚಾರದ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ನೈರುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಇ. ವಿಜಯಾ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಕೊರೊನಾ ಸೋಂಕು ಹರಡುವ ಕಾರಣದಿಂದ ರದ್ದು ಮಾಡಲಾಗಿದ್ದ ರೈಲು ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಬುಕ್ಕಿಂಗ್ ಸೌಲಭ್ಯವನ್ನು ಶುಕ್ರವಾರದಿಂದ (ಮೇ 22) ಪುನರಾರಂಭಿಸಲಾಗುವುದು ಎಂದು ನೈರುತ್ಯ ರೈಲ್ವೆ ತಿಳಿಸಿದೆ.</p>.<p>ಕಾಯ್ದಿರಿಸಿದ ಟಿಕೆಟ್ಗಳನ್ನು ಪಡೆದುಕೊಳ್ಳಲು ಕೌಂಟರ್ಗಳನ್ನು ಹಂತಹಂತವಾಗಿ ತೆರೆಯಲು ಇಲಾಖೆ ಮುಂದಾಗಿದ್ದು, ಮೊದಲ ಹಂತದಲ್ಲಿ ಹುಬ್ಬಳ್ಳಿ ವಿಭಾಗದಲ್ಲಿ ಹುಬ್ಬಳ್ಳಿ, ಬೆಳಗಾವಿ, ಬಳ್ಳಾರಿ, ವಿಜಯಪುರ, ಧಾರವಾಡ, ಹೊಸಪೇಟೆ ಮತ್ತು ವಾಸ್ಕೋಡಗಾಮದ ನಿಲ್ದಾಣಗಳಲ್ಲಿ ಕೌಂಟರ್ಗಳು ಆರಂಭವಾಗಲಿವೆ.</p>.<p>ಇಲಾಖೆಯಿಂದ ಪರವಾನಗಿ ಪಡೆದ ಏಜೆಂಟರು ಮತ್ತು ಸೇವಾ ಕೇಂದ್ರಗಳಲ್ಲಿಯೂ ಟಿಕೆಟ್ ನೀಡಬಹುದು. ಟಿಕೆಟ್ಗಳನ್ನು ಪಡೆಯುವ ವೇಳೆ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು, ಅಂತರ ಕಾಯ್ದುಕೊಳ್ಳಬೇಕು ಎಂದು ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.</p>.<p>ಮುಂದಿನ ಎರಡ್ಮೂರು ದಿನಗಳಲ್ಲಿ 200ಕ್ಕೂ ಹೆಚ್ಚು ರೈಲುಗಳ ಸಂಚಾರದ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ನೈರುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಇ. ವಿಜಯಾ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>