ಸಭೆಯಲ್ಲಿ ಸಂಸದರಾದ ಶಿವಕುಮಾರ ಉದಾಸಿ, ಪಿ.ಸಿ. ಗದ್ದಿಗೌಡರ, ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ, ಗೋವಾ ರಾಜ್ಯ ಸಚಿವ ನೀಲೇಶ್ ಕಾಬ್ರಾಲ್, ವಾಣಿಜ್ಯೋದ್ಯಮ ಸಂಸ್ಥೆ, ಪ್ರಯಾಣಿಕ ಸಂಘಗಳು, ಗ್ರಾಹಕ ರಕ್ಷಣಾ ಸಂಘಟನೆ, ಅಂಗವಿಕಲರ ಸಂಘಟನೆಗಳು ಹಾಗೂ ರೈಲ್ವೆ ಮಂಡಳಿಯ ವಿಶೇಷ ಪ್ರತಿನಿಧಿತ್ವ ಹೊಂದಿರುವ 30 ಸದಸ್ಯರು ಭಾಗವಹಿಸಿದ್ದರು.ನೈರುತ್ಯ ರೈಲ್ವೆಯ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕ ಪಿ.ಕೆ. ಮಿಶ್ರಾ, ಇಲಾಖೆಗಳ ಪ್ರಧಾನ ಮುಖ್ಯಸ್ಥರು ಹಾಗೂ ಹಿರಿಯ ಅಧಿಕಾರಿಗಳು ಇದ್ದರು.