ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ‘ಸಾರ್ವಜನಿಕ ಸ್ಥಳಗಳನ್ನು ಸಂಪೂರ್ಣವಾಗಿ ಬಂದ್ ಮಾಡುವ ಬದಲು ನಿತ್ಯ ಬೆಳಿಗ್ಗೆ 7 ಗಂಟೆಯಿಂದ 10ರ ವರೆಗೆ ಮತ್ತು ಸಂಜೆ 4 ಗಂಟೆಯಿಂದ 6ರ ತನಕ ವಾಯುವಿಹಾರಕ್ಕೆ ಪ್ರವೇಶ ಕಲ್ಪಿಸಲು ನಿರ್ಧರಿಸಲಾಗಿದೆ. ಬೇರೆ ಅವಧಿಯಲ್ಲಿ ಜನರ ಓಡಾಟ ಕಡಿಮೆಯಾದರೆ ಬಾಕಿ ಉಳಿದ ಕಾಮಗಾರಿ ಮುಗಿಸಲು ವೇಗವಾಗಿ ಸಾಧ್ಯವಾಗಲಿದೆ. ಈ ಕುರಿತು ಒಂದೆರೆಡು ದಿನಗಳಲ್ಲಿ ಆದೇಶ ಹೊರಡಿಸಲಾಗುವುದು’ ಎಂದರು.