ಅಳ್ನಾವರ: ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಕಾರ್ಯ ಚಟುವಟಿಕೆಗಳನ್ನು ವಿಸ್ತರಿಸುವುದರ ಜೊತೆಗೆ ಸದಸ್ಯರ ಸಂಖ್ಯೆಯನ್ನು ಹೆಚ್ಚಿಸಲು ಶ್ರಮಿಸುವುದಾಗಿ ಕಸಾಪ ಅಳ್ನಾವರ ತಾಲ್ಲೂಕಿನ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಡಾ.ಬಸವರಾಜ ಮೂಡಬಾಗಿಲ ಹೇಳಿದರು.
ಕಸಾಪ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ ಅವರಿಂದ ಆದೇಶ ಪ್ರತಿ ಸ್ವೀಕರಿಸಿದ ನಂತರ ಅವರು ಮಾತನಾಡಿದರು.ತಾಲ್ಲೂಕಿನ ಸರ್ವ ಸದಸ್ಯರ ಸಹಕಾರ ಸಾಹಿತಿ, ಲೇಖಕರ ಮಾರ್ಗದರ್ಶನ ಮತ್ತು ಕಸಾಪ ನಿಯಮಾವಳಿಯಂತೆ ಸಾಹಿತ್ಯ ಪರಿಷತ್ನ ಚಟುವಟಿಕೆಗಳು ನಿರಂತರವಾಗಿ ನಡೆಯುವಂತೆ ಕಾರ್ಯ ಯೋಜನೆ ಹಾಕಿಕೊಂಡು ಮಾದರಿ ತಾಲ್ಲೂಕು ಘಟಕವನ್ನಾಗಿಸಲು ಪ್ರಯತ್ನಿಸುವುದಾಗಿ ತಿಳಿಸಿದರು.
ಜಿಲ್ಲಾ ಗೌರವ ಕಾರ್ಯದರ್ಶಿ ಕೆ.ಎಸ್.ಕೌಜಲಗಿ, ಕೋಶಾಧ್ಯಕ್ಷ ದೊಡಮನಿ, ಡಾ.ಜಿನದತ್ತ ಹಡಗಲಿ, ಪ್ರವೀಣ ಪವಾರ, ಗುರುರಾಜ ಸಬನೀಸ್, ವೈ.ವಿ.ಶಿಂಪಿ, ಮಲ್ಲಿಕಾರ್ಜುನ ಪುರದನಗೌಡರ ಮತ್ತು ಜಿಲ್ಲೆಯ ಎಲ್ಲ ತಾಲ್ಲೂಕು ಘಟಕಗಳ ಅಧ್ಯಕ್ಷರು ಇದ್ದರು.