ಕಾಮಗಾರಿಗೆ ಕೇಂದ್ರ ಸರ್ಕಾರ ಸಾಕಷ್ಟು ಹಣ ಕೊಟ್ಟಿದೆ, ಎಲ್ಲ ಅನುಕೂಲ ಮಾಡಿಕೊಟ್ಟ ಮೇಲೂ ಕೆಲಸ ಮುಗಿಸಿಲ್ಲ. ಒಪ್ಪಂದದ ಪ್ರಕಾರ 2018ರ ಫೆಬ್ರುವರಿಯಲ್ಲಿಯೇ ಕಾಮಗಾರಿ ಮುಗಿಯಬೇಕಿತ್ತು. ಕೊಟ್ಟ ಅವಧಿ ಮುಗಿದು ಒಂದು ವರ್ಷವಾದರೂ ಕಾಮಗಾರಿ ಪೂರ್ಣಗೊಳಿಸಿಲ್ಲವೆಂದರೆ ನೀವು ಹೇಗೆ ಕೆಲಸ ಮಾಡುತ್ತೀರಿ ಎಂಬುದು ಗೊತ್ತಾಗುತ್ತದೆ ಎಂದು ಪ್ರಹ್ಲಾದ ಜೋಶಿ ಕಾಮಗಾರಿಯ ಯೋಜನಾ ಅಧಿಕಾರಿ ಅನಿಲ ಸಂಪಗಾವ್ ಅವರನ್ನು ತರಾಟೆಗೆ ತೆಗೆದುಕೊಂಡರು. ಹೈಟ್ ಕಂಪನಿ ಕಾಮಗಾರಿ ನಿರ್ಮಾಣದ ಹೊಣೆ ಹೊತ್ತಿದೆ.