ಗದಗ: ‘ಮಳೆ ಅಭಾವದಿಂದ ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ. ಕೃಷ್ಣರಾಜ ಸಾಗರ ಅಲ್ಲದೇ ರಾಜ್ಯದ ಎಲ್ಲ ಜಲಾಶಯಗಳಲ್ಲಿ ನೀರಿನ ಪ್ರಮಾಣ ಕುಸಿದಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಸಾಮಾಜಿಕ ಸೇವಾ ಸಂಸ್ಥೆಗಳು, ಮಠಗಳು ರೈತರ ನೆರವಿಗೆ ಬರಬೇಕು. ನಾವೆಲ್ಲರೂ ರೈತ ಹೋರಾಟ ಬೆಂಬಲಿಸುತ್ತೇವೆ’ ಎಂದು ಗದಗ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ತಿಳಿಸಿದರು.