ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಪೊಲೀಸ್ ಕಮಿಷನರ್ ಎಂ.ಎನ್.ನಾಗರಾಜ್, ‘ಘಟನೆ ಏನೆಂಬುದು ತಿಳಿದಿಲ್ಲ. ಎಲ್ಲಿ ಮತ್ತು ಯಾವಾಗ ನಡೆದಿದೆ ಎಂಬುದು ಗೊತ್ತಿಲ್ಲ. ಈ ಬಗ್ಗೆ ವಿಚಾರಣೆ ನಡೆಸುತ್ತೇನೆ. ಸಾರ್ವಜನಿಕರೊಂದಿಗೆ ಪೊಲೀಸ್ ಸಿಬ್ಬಂದಿ ಸೌಜನ್ಯದಿಂದ ನಡೆದುಕೊಳ್ಳಬೇಕು ಎಂಬ ಸೂಚನೆ ಇದೆ. ಸಿಬ್ಬಂದಿ ತಪ್ಪಿದ್ದರೆ ಶಿಸ್ತುಕ್ರಮಕೈಗೊಳ್ಳುತ್ತೇನೆ’ ಎಂದು ತಿಳಿಸಿದರು.