‘ಕೇಂದ್ರ ಸರ್ಕಾರ ಅನುದಾನ ನೀಡುವಲ್ಲಿ ತಾತರಮ್ಯ ಸಾಬೀತು ಮಾಡಿದರೆ, 28 ಕ್ಷೇತ್ರದಲ್ಲಿ ಎಂಪಿ ಅಭ್ಯರ್ಥಿಗಳನ್ನು ನಿಲ್ಲಿಸುವುದಿಲ್ಲ’ ಎನ್ನುವ ಬಿಜೆಪಿಯ ಸಿ.ಟಿ. ರವಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಈ ಕುರಿತು ಚರ್ಚೆ ನಡೆಯಲಿ. ಯಾವ್ಯಾವ ರಾಜ್ಯಕ್ಕೆ ಎಷ್ಟು ಅನುದಾನ ನೀಡಲಾಗಿದೆ, ಎಷ್ಟು ಸಾಲ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರವೇ ಶ್ವೇತಪತ್ರ ಹೊರಡಿಸಲಿ. ರಾಜ್ಯ ಸರ್ಕಾರದ ತೆರಿಗೆ ಹಣವನ್ನೇ ಕೇಂದ್ರ ಸರ್ಕಾರ ನಮಗೆ ಅನುದಾನವಾಗಿ ನೀಡುವುದು. ಅವರೇನು ನಮಗೆ ದಾನ ಕೊಡುವುದಿಲ್ಲ’ ಎಂದು ಹೇಳಿದರು.