<p><strong>ಹುಬ್ಬಳ್ಳಿ: </strong>ಅವಳಿ ನಗರದಲ್ಲಿ ₹150 ಕೋಟಿ ವೆಚ್ಚದಲ್ಲಿ ರಸ್ತೆಗಳ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ಆಗ ಎರಡೂ ನಗರಗಳು ದೂಳು ಮುಕ್ತವಾಗಲಿವೆ. ಅದೇ ನಮ್ಮ ಗರಿಯಾಗಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು.</p>.<p>ಇಲ್ಲಿನ ಕಾಡಸಿದ್ಧೇಶ್ವರ ಕಾಲೇಜಿನಿಂದ ತೋಳನಕೆರೆಯವರೆಗೆ ನಿರ್ಮಿಸಿರುವ ಟೆಂಡರ್ ಶ್ಯೂರ್ ರಸ್ತೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಎರಡೂ ನಗರಗಳ ಸಮಗ್ರ ಅಭಿವೃದ್ಧಿಗಾಗಿ ₹ 500 ಕೋಟಿ ವಿಶೇಷ ಪ್ಯಾಕೇಜ್ ಅನ್ನು ಮುಂಬರುವ ಬಜೆಟ್ನಲ್ಲಿ ಘೋಷಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಿದರು.</p>.<p>₹ 44 ಕೋಟಿ ವೆಚ್ಚದಲ್ಲಿ ಇದೊಂದು ಮಾದರಿ ರಸ್ತೆ ನಿರ್ಮಿಸಲಾಗಿದೆ. ರಾಜ್ಯದಲ್ಲಿ ಟೆಂಡರ್ ಶ್ಯೂರ್ನಡಿ ನಿರ್ಮಿಸಿರುವ ಮೊದಲ ಚತುಷ್ಪತ ರಸ್ತೆಯಾಗಿದೆ. ಇದು ನನ್ನ ಕನಸಿನ ಕೂಸಾಗಿತ್ತು. ಅದಿಂದು ನನಸಾಗಿದೆ ಎಂದರು.</p>.<p>ಮಹಾನಗರ ಪಾಲಿಕೆಗೆ ಬರಬೇಕಾದ ₹130 ಕೋಟಿ ಪಿಂಚಣಿ ಹಣವನ್ನು ಹಿಂದಿನ ಸರ್ಕಾರ ಬಿಡುಗಡೆ ಮಾಡಿರಲಿಲ್ಲ. ಯಡಿಯೂರಪ್ಪ ಅವರು ₹ 100 ಕೋಟಿ ಬಿಡುಗಡೆಗೆ ಒಪ್ಪಿದ್ದು, ಈಗಾಗಲೇ ₹ 26 ಕೋಟಿ ಬಿಡುಗಡೆಯಾಗಿದೆ. ಮಾರ್ಚ್ ಅಂತ್ಯದೊಳಗೆ ಎಲ್ಲ ಹಣ ಪಾಲಿಕೆಗೆ ದೊರೆಯಲಿದೆ ಎಂದು ಹೇಳಿದರು.</p>.<p>ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿ, ರಾಜ್ಯದಲ್ಲಿ ಪ್ರವಾಹ ಬಂದಿದ್ದರಿಂದಾಗಿ ₹ 20 ಸಾವಿರ ಕೋಟಿ ಹೆಚ್ಚುವರಿ ವೆಚ್ಚ ಮಾಡಬೇಕಾಯಿತು. ಇದರಿಂದಾಗಿ ಅಭಿವೃದ್ಧಿ ವೇಗ ಕಡಿಮೆಯಾಗಿದೆ. ಮುಂದಿನ ಆರು ತಿಂಗಳಲ್ಲಿ ಅಭಿವೃದ್ಧಿಗೆ ವೇಗ ಸಿಗಲಿದೆ ಎಂದರು.</p>.<p>ಧಾರವಾಡ ಜಿಲ್ಲೆಗೆ ಸಿಆರ್ಎಫ್ನಡಿ ₹ 562 ಕೋಟಿ ಅನುದಾನ ಬಂದಿದೆ. ಎಲ್ಲ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲಾಗುವುದು. ಪೈಪ್ಲೈನ್ಗಾಗಿ ರಸ್ತೆ ಅಗೆಯುವಾಗ ಇಲಾಖೆಯ ಅನುಮತಿ ಪಡೆದುಕೊಂಡೇ ರಸ್ತೆ ಅಗೆಯಬೇಕು ಎಂದು ಸಲಹೆ ಮಾಡಿದರು.</p>.<p>ಕಾಂಗ್ರೆಸ್ ಮುಖಂಡ ಎಚ್.ಸಿ. ಮಹದೇವಪ್ಪ ಮಾತನಾಡಿ, ‘ಟೆಂಡರ್ ಶ್ಯೂರ್ ರಸ್ತೆ ಕಾಮಗಾರಿ ಸಚಿವನಾಗಿದ್ದಾಗ ಅನುಮತಿ ನೀಡಿದ್ದೆ. ಈಗ ಶಾಸಕನೂ ಆಗಿಲ್ಲ. ಆದರೂ, ರಾಜಕೀಯ ಎದುರಾಳಿಯಾಗಿರುವ ನನ್ನನ್ನು ಕರೆದಿರುವುದು ಆರೋಗ್ಯಕರ ಬೆಳವಣಿಗೆ. ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಅವಳಿ ನಗರದಲ್ಲಿ ₹150 ಕೋಟಿ ವೆಚ್ಚದಲ್ಲಿ ರಸ್ತೆಗಳ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ಆಗ ಎರಡೂ ನಗರಗಳು ದೂಳು ಮುಕ್ತವಾಗಲಿವೆ. ಅದೇ ನಮ್ಮ ಗರಿಯಾಗಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು.</p>.<p>ಇಲ್ಲಿನ ಕಾಡಸಿದ್ಧೇಶ್ವರ ಕಾಲೇಜಿನಿಂದ ತೋಳನಕೆರೆಯವರೆಗೆ ನಿರ್ಮಿಸಿರುವ ಟೆಂಡರ್ ಶ್ಯೂರ್ ರಸ್ತೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಎರಡೂ ನಗರಗಳ ಸಮಗ್ರ ಅಭಿವೃದ್ಧಿಗಾಗಿ ₹ 500 ಕೋಟಿ ವಿಶೇಷ ಪ್ಯಾಕೇಜ್ ಅನ್ನು ಮುಂಬರುವ ಬಜೆಟ್ನಲ್ಲಿ ಘೋಷಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಿದರು.</p>.<p>₹ 44 ಕೋಟಿ ವೆಚ್ಚದಲ್ಲಿ ಇದೊಂದು ಮಾದರಿ ರಸ್ತೆ ನಿರ್ಮಿಸಲಾಗಿದೆ. ರಾಜ್ಯದಲ್ಲಿ ಟೆಂಡರ್ ಶ್ಯೂರ್ನಡಿ ನಿರ್ಮಿಸಿರುವ ಮೊದಲ ಚತುಷ್ಪತ ರಸ್ತೆಯಾಗಿದೆ. ಇದು ನನ್ನ ಕನಸಿನ ಕೂಸಾಗಿತ್ತು. ಅದಿಂದು ನನಸಾಗಿದೆ ಎಂದರು.</p>.<p>ಮಹಾನಗರ ಪಾಲಿಕೆಗೆ ಬರಬೇಕಾದ ₹130 ಕೋಟಿ ಪಿಂಚಣಿ ಹಣವನ್ನು ಹಿಂದಿನ ಸರ್ಕಾರ ಬಿಡುಗಡೆ ಮಾಡಿರಲಿಲ್ಲ. ಯಡಿಯೂರಪ್ಪ ಅವರು ₹ 100 ಕೋಟಿ ಬಿಡುಗಡೆಗೆ ಒಪ್ಪಿದ್ದು, ಈಗಾಗಲೇ ₹ 26 ಕೋಟಿ ಬಿಡುಗಡೆಯಾಗಿದೆ. ಮಾರ್ಚ್ ಅಂತ್ಯದೊಳಗೆ ಎಲ್ಲ ಹಣ ಪಾಲಿಕೆಗೆ ದೊರೆಯಲಿದೆ ಎಂದು ಹೇಳಿದರು.</p>.<p>ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿ, ರಾಜ್ಯದಲ್ಲಿ ಪ್ರವಾಹ ಬಂದಿದ್ದರಿಂದಾಗಿ ₹ 20 ಸಾವಿರ ಕೋಟಿ ಹೆಚ್ಚುವರಿ ವೆಚ್ಚ ಮಾಡಬೇಕಾಯಿತು. ಇದರಿಂದಾಗಿ ಅಭಿವೃದ್ಧಿ ವೇಗ ಕಡಿಮೆಯಾಗಿದೆ. ಮುಂದಿನ ಆರು ತಿಂಗಳಲ್ಲಿ ಅಭಿವೃದ್ಧಿಗೆ ವೇಗ ಸಿಗಲಿದೆ ಎಂದರು.</p>.<p>ಧಾರವಾಡ ಜಿಲ್ಲೆಗೆ ಸಿಆರ್ಎಫ್ನಡಿ ₹ 562 ಕೋಟಿ ಅನುದಾನ ಬಂದಿದೆ. ಎಲ್ಲ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲಾಗುವುದು. ಪೈಪ್ಲೈನ್ಗಾಗಿ ರಸ್ತೆ ಅಗೆಯುವಾಗ ಇಲಾಖೆಯ ಅನುಮತಿ ಪಡೆದುಕೊಂಡೇ ರಸ್ತೆ ಅಗೆಯಬೇಕು ಎಂದು ಸಲಹೆ ಮಾಡಿದರು.</p>.<p>ಕಾಂಗ್ರೆಸ್ ಮುಖಂಡ ಎಚ್.ಸಿ. ಮಹದೇವಪ್ಪ ಮಾತನಾಡಿ, ‘ಟೆಂಡರ್ ಶ್ಯೂರ್ ರಸ್ತೆ ಕಾಮಗಾರಿ ಸಚಿವನಾಗಿದ್ದಾಗ ಅನುಮತಿ ನೀಡಿದ್ದೆ. ಈಗ ಶಾಸಕನೂ ಆಗಿಲ್ಲ. ಆದರೂ, ರಾಜಕೀಯ ಎದುರಾಳಿಯಾಗಿರುವ ನನ್ನನ್ನು ಕರೆದಿರುವುದು ಆರೋಗ್ಯಕರ ಬೆಳವಣಿಗೆ. ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>