<p><strong>ಹುಬ್ಬಳ್ಳಿ:</strong> ಆಂಧ್ರಪ್ರದೇಶ ಮೂಲದ ಇಬ್ಬರನ್ನು ಮಂಗಳವಾರ ಬಂಧಿಸಿರುವ ನಗರದ ಸಿಇಎನ್ ಅಪರಾಧ ಠಾಣೆ ಪೊಲೀಸರು, ಸುಮಾರು ₹4 ಲಕ್ಷ ಮೌಲ್ಯದ 20 ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಕಾಲೇಜು ಬ್ಯಾಗ್ನಲ್ಲಿ ಗಾಂಜಾ ತಂದಿದ್ದ ಆರೋಪಿಗಳು, ಗದಗ ರಸ್ತೆಯಲ್ಲಿರುವ ರೈಲ್ವೆ ಆಸ್ಪತ್ರೆ ಬಳಿ ಮಾರಾಟ ಮಾಡುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ, ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ.</p>.<p><strong>₹18 ಲಕ್ಷ ವಂಚನೆ:</strong> ಹೂಡಿಕೆ ಹೆಸರಿನಲ್ಲಿ ವಿದ್ಯಾನಗರದ ಯುವರಾಜ್ ಎಂಬುವರಿಗೆ ವಂಚಕರು ₹18.48 ಲಕ್ಷ ವಂಚಿಸಿದ್ದಾರೆ. ಗೂಗಲ್ ಸರ್ಚ್ ಮಾಡುತ್ತಿದ್ದ ಯುವರಾಜ್ ಅವರು, ಆಮೇಜಾನ್ ಹೋಮ್ ಬೇಸ್ಡ್ ವರ್ಕ್ ಎಂಬ ಮಾಹಿತಿ ಮೇಲೆ ಕ್ಲಿಕ್ ಮಾಡಿದ್ದಾರೆ. ನಂತರ ಅಲ್ಲಿ ಸಿಕ್ಕ ವಾಟ್ಸ್ಆ್ಯಪ್ ಸಂಖ್ಯೆಯೊಂದಿಗೆ ಸಂಪರ್ಕ ಸಾಧಿಸಿದ್ದಾರೆ.</p>.<p>ಈ ವೇಳೆ ವಂಚಕರು ಆಮೇಜಾನ್ನಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಗಳಿಸಬಹುದು ಎಂದು ನಂಬಿಸಿದ್ದಾರೆ. ಆರಂಭದಲ್ಲಿ ಹೂಡಿಕೆ ಮಾಡಿದ ಹಣಕ್ಕೆ ಹಣ ಕೊಟ್ಟಿರುವ ವಂಚಕರು, ನಂತರ ಹೆಚ್ಚಿನ ಹಣವನ್ನು ಹಂತಹಂತವಾಗಿ ವರ್ಗಾಯಿಸಿಕೊಂಡು ವಂಚಿಸಿದ್ದಾರೆ. ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><strong>ಚಾಕು ಇರಿತ:</strong> ಕೊಟ್ಟ ಸಾಲವನ್ನು ವಾಪಸ್ ಕೇಳಿದ್ದಕ್ಕೆ ನೇಕಾರನಗರದ ನವೀನ್ ಎಂಬಾತ ಗೌಳಿ ಗಲ್ಲಿಯ ಕಾರ್ತಿಕ ಎಂಬುವರಿಗೆ ಚಾಕುವಿನಿಂದ ಇರಿದಿರುವ ಘಟನೆ ಅಂಚಟಗೇರಿ ಓಣಿಯಲ್ಲಿ ನಡೆದಿದೆ. ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><strong>ಬಂಧನ:</strong> ನಗರದ ಅಂಚಟಗೇರಿ ಓಣಿಯ ಬಾರ್ ಬಳಿ ಚಾಕು ಇಟ್ಟುಕೊಂಡು ಓಡಾಡುತ್ತಿದ್ದ ಇಬ್ಬರನ್ನು ಉಪನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ದೇಸಾಯಿ ಓಣಿಯ ಬಾಷಾ ಮತ್ತು ಮೊಹಮ್ಮದ್ ಬಂಧಿತರು. ಮತ್ತೊಬ್ಬ ಇಂದಿರಾನಗರದ ತರುಣ ಪರಾರಿಯಾಗಿದ್ದಾನೆ. ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಆಂಧ್ರಪ್ರದೇಶ ಮೂಲದ ಇಬ್ಬರನ್ನು ಮಂಗಳವಾರ ಬಂಧಿಸಿರುವ ನಗರದ ಸಿಇಎನ್ ಅಪರಾಧ ಠಾಣೆ ಪೊಲೀಸರು, ಸುಮಾರು ₹4 ಲಕ್ಷ ಮೌಲ್ಯದ 20 ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಕಾಲೇಜು ಬ್ಯಾಗ್ನಲ್ಲಿ ಗಾಂಜಾ ತಂದಿದ್ದ ಆರೋಪಿಗಳು, ಗದಗ ರಸ್ತೆಯಲ್ಲಿರುವ ರೈಲ್ವೆ ಆಸ್ಪತ್ರೆ ಬಳಿ ಮಾರಾಟ ಮಾಡುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ, ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ.</p>.<p><strong>₹18 ಲಕ್ಷ ವಂಚನೆ:</strong> ಹೂಡಿಕೆ ಹೆಸರಿನಲ್ಲಿ ವಿದ್ಯಾನಗರದ ಯುವರಾಜ್ ಎಂಬುವರಿಗೆ ವಂಚಕರು ₹18.48 ಲಕ್ಷ ವಂಚಿಸಿದ್ದಾರೆ. ಗೂಗಲ್ ಸರ್ಚ್ ಮಾಡುತ್ತಿದ್ದ ಯುವರಾಜ್ ಅವರು, ಆಮೇಜಾನ್ ಹೋಮ್ ಬೇಸ್ಡ್ ವರ್ಕ್ ಎಂಬ ಮಾಹಿತಿ ಮೇಲೆ ಕ್ಲಿಕ್ ಮಾಡಿದ್ದಾರೆ. ನಂತರ ಅಲ್ಲಿ ಸಿಕ್ಕ ವಾಟ್ಸ್ಆ್ಯಪ್ ಸಂಖ್ಯೆಯೊಂದಿಗೆ ಸಂಪರ್ಕ ಸಾಧಿಸಿದ್ದಾರೆ.</p>.<p>ಈ ವೇಳೆ ವಂಚಕರು ಆಮೇಜಾನ್ನಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಗಳಿಸಬಹುದು ಎಂದು ನಂಬಿಸಿದ್ದಾರೆ. ಆರಂಭದಲ್ಲಿ ಹೂಡಿಕೆ ಮಾಡಿದ ಹಣಕ್ಕೆ ಹಣ ಕೊಟ್ಟಿರುವ ವಂಚಕರು, ನಂತರ ಹೆಚ್ಚಿನ ಹಣವನ್ನು ಹಂತಹಂತವಾಗಿ ವರ್ಗಾಯಿಸಿಕೊಂಡು ವಂಚಿಸಿದ್ದಾರೆ. ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><strong>ಚಾಕು ಇರಿತ:</strong> ಕೊಟ್ಟ ಸಾಲವನ್ನು ವಾಪಸ್ ಕೇಳಿದ್ದಕ್ಕೆ ನೇಕಾರನಗರದ ನವೀನ್ ಎಂಬಾತ ಗೌಳಿ ಗಲ್ಲಿಯ ಕಾರ್ತಿಕ ಎಂಬುವರಿಗೆ ಚಾಕುವಿನಿಂದ ಇರಿದಿರುವ ಘಟನೆ ಅಂಚಟಗೇರಿ ಓಣಿಯಲ್ಲಿ ನಡೆದಿದೆ. ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><strong>ಬಂಧನ:</strong> ನಗರದ ಅಂಚಟಗೇರಿ ಓಣಿಯ ಬಾರ್ ಬಳಿ ಚಾಕು ಇಟ್ಟುಕೊಂಡು ಓಡಾಡುತ್ತಿದ್ದ ಇಬ್ಬರನ್ನು ಉಪನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ದೇಸಾಯಿ ಓಣಿಯ ಬಾಷಾ ಮತ್ತು ಮೊಹಮ್ಮದ್ ಬಂಧಿತರು. ಮತ್ತೊಬ್ಬ ಇಂದಿರಾನಗರದ ತರುಣ ಪರಾರಿಯಾಗಿದ್ದಾನೆ. ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>