ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ವಿಜಯ ಕುಲಕರ್ಣಿ, ‘ಬೆಳಗಾವಿಯಿಂದ ಬರುವ ಸಂದರ್ಭದಲ್ಲಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್ ಸವಾರನ ತಪ್ಪಿಸುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಅಪಘಾತ ನಡೆದ ತಕ್ಷಣ ಪೊಲೀಸರಿಗೆ ನಾನೇ ಕರೆ ಮಾಡಿ ಮಾಹಿತಿ ನೀಡಿದೆ. ಆಂಬುಲೆನ್ಸ್ ಕರೆಯಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸುವ ವ್ಯವಸ್ಥೆ ಮಾಡಿ, ಸ್ಥಳದಿಂದ ನಾನು ನಿರ್ಗಮಿಸಿದೆ’ ಎಂದಿದ್ದಾರೆ.