ಹುಬ್ಬಳ್ಳಿ:ಬೈಕ್ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದರಿಂದ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಹಳೇ ಪಿ.ಬಿ. ರಸ್ತೆಯ ಪ್ರೆಸಿಡೆಂಟ್ ಹೋಟೆಲ್ ಬಳಿ ಬುಧವಾರ ರಾತ್ರಿ ನಡೆದಿದೆ.
ನಗರದ ಕೆ.ಎಚ್.ಬಿ ಕಾಲೊನಿಯ ನವೀನ ಗೊಲ್ಲರ (22) ಹಾಗೂ ಹಾವೇರಿಯ ಗಿರೀಶ ಕಬ್ಬಿಣಕಂತಿಮಠ(27 ) ಮೃತರು.
ಧಾರವಾಡ ಕಡೆಯಿಂದ ಹುಬ್ಬಳ್ಳಿಗೆ ಬರುವಾಗ ಘಟನೆ ನಡೆದಿದೆ. ಮರಣೋತ್ತರ ಪರೀಕ್ಷೆ ನಡೆಸಿ, ಶವಗಳನ್ನು ಕುಟುಂಬದವರಿಗೆ ಹಸ್ತಾಂತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಉತ್ತರ ಸಂಚಾರ ಠಾಣೆ ಪೊಲೀಸರು ತಿಳಿಸಿದರು.